Advertisement

ಲಿಂಗಾಯತ ಪ್ರತ್ಯೇಕ ಧರ್ಮಕ್ಕಾ ಗಿ ಬೃಹತ್‌ ರ್ಯಾಲಿ

10:19 AM Aug 21, 2017 | |

ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಆ.22ರಂದು ನಡೆಯಲಿರುವ ಬೃಹತ್‌ ರ್ಯಾಲಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ನಾಗನೂರು ರುದ್ರಾಕ್ಷಿಮಠದ ಡಾ| ಸಿದ್ದರಾಮ ಸ್ವಾಮೀಜಿ ತಿಳಿಸಿದರು.

Advertisement

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ರ್ಯಾಲಿ ಬಳಿಕ ರಾಜ್ಯದ ವಿವಿಧ ಕಡೆ ರ್ಯಾಲಿ ಆಯೋಜಿಸಲಾಗುವುದು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿ ಸುಮಾರು 20ರಿಂದ 25 ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಈ ರ್ಯಾಲಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವರಿಕೆ ಆಗುವಂತೆ ಮಾಡಲಾಗುವುದು ಎಂದರು. ವೀರಶೈವ ಮಹಾಸಭಾ ಮರು ನಾಮಕರಣ ಮಾಡಿ ಲಿಂಗಾಯತ ಮಹಾಸಭಾ ಮಾಡುವಂತೆ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಮನವರಿಕೆ ಮಾಡಿಕೊಳ್ಳಲು ಉದ್ದೇಶಿಸಿದ್ದೇವೆ. ಈಗಾಗಲೇ ಬೆಳಗಾವಿ ಜಿಲ್ಲಾ ಘಟಕದ ಹೆಸರು ಬದಲಾಯಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲೂ ಹೆಸರು ಬದಲಾಯಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರಂತೆ ಕೇಂದ್ರ ಸಮಿತಿಯ ಹೆಸರನ್ನು ಮರು ನಾಮಕರಣ ಮಾಡುವಂತೆ ಅಧ್ಯಕ್ಷರ 
ಮನವೊಲಿಸಲಾಗುವುದು ಎಂದರು.

ಲಿಂಗಾಯತ ಸ್ವತಂತ್ರ ಧರ್ಮವಾದರೆ ಹಿಂದೂಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹುಬ್ಬಳ್ಳಿಯಲ್ಲಿ ನಡೆದ ಬೈಠಕ್‌ನಲ್ಲಿ ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಲಿಂಗಾಯತ ಸ್ವತಂತ್ರ ಧರ್ಮವಾದರೆ ಹಿಂದೂ ಧರ್ಮಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ, ನೇಗಿನಹಾಳ ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ರುದ್ರಾಕ್ಷಿಮಠದ ಮಹಾಂತ ದೇವರು ಸುದ್ದಿಗೋಷ್ಠಿಯಲ್ಲಿದ್ದರು.

ಬೆಳಗಾವಿ ರ್ಯಾಲಿ ಬಳಿಕ ಮಹಾರಾಷ್ಟ್ರದ ಲಾತೂರಿನಲ್ಲಿ ಸೆ.3ರಂದು ಶ್ರೀ ಶಿವಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಬೃಹತ್‌ ರ್ಯಾಲಿ ನಡೆಸಿ, ಅಲ್ಲಿನ ಸರ್ಕಾರಕ್ಕೂ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಲು ಒತ್ತಾಯಿಸಲಾಗುವುದು. ಸೆ.10ರಂದು ಕಲಬುರಗಿಯಲ್ಲಿ, ಸೆ.30ರಂದು ಬೆಂಗಳೂರಿನಲ್ಲಿ ಬೃಹತ್‌ ರ್ಯಾಲಿ ನಡೆಸಿ, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಮಾತೆ ಮಹಾದೇವಿ, ಬಸವಧರ್ಮ ಪೀಠಾಧ್ಯಕ್ಷೆ.

ಧರ್ಮದ ವಿಷಯದಲ್ಲಿ ರಾಜಕೀಯ ನಾಯಕರು ತಲೆ ಹಾಕುವುದೇ ತಪ್ಪು. ನಮ್ಮ ಪಕ್ಷವಂತೂ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ. ಹೊರಟ್ಟಿ ಅವರು ಲಿಂಗಾಯತ ವಿಷಯದಲ್ಲಿ ಅಧ್ಯಯನ ನಡೆಸಿರಬಹುದು. ಆದರೆ, ಈ ವಿಷಯದಲ್ಲಿ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ.
ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

Advertisement

ಲಿಂಗಾಯತ ಪ್ರತ್ಯೇಕ ಧರ್ಮ ವಿಷಯದಲ್ಲಿ ರಾಜ್ಯದ ಶೇ.80 ಜನರು ಪರವಾಗಿದ್ದರೂ ಎನ್‌.ತಿಪ್ಪಣ್ಣ, ಶಾಮನೂರು ಅವರಂಥ ನಾಯಕರಿಂದ ಮಾತ್ರ ಆಕ್ಷೇಪ ಕೇಳಿ ಬರುತ್ತಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆ ಆದಲ್ಲಿ ತಮ್ಮ ಸೇವೆಗೆ ಭಕ್ತರು ಬರುವುದಿಲ್ಲ ಎಂಬ ಭಯದಲ್ಲಿರುವ ಪಂಚಪೀಠದ
ಸ್ವಾಮಿಗಳು, ಕೆಲ ಮಠಾ ಧೀಶರು ಇದನ್ನು ವಿರೋಧಿಸುತ್ತಿದ್ದಾರೆ.
ಬಸವರಾಜ ಹೊರಟ್ಟಿ, ವಿಧಾನಪರಿಷತ್‌ ಸದಸ್ಯ

ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ರಾಜಕೀಯ ಸ್ವಾರ್ಥಕ್ಕಾಗಿ ಕೆಲವು ನಾಯಕರು ಧರ್ಮವನ್ನು ಒಡೆಯುವ ಹುನ್ನಾರ ನಡೆಸಿದ್ದಾರೆ. ವೀರಶೈವ, ಲಿಂಗಾಯತ ಎರಡೂ ಒಂದೆ. 43ಕ್ಕೂ ಹೆಚ್ಚು ಶರಣರ ವಚನಗಳಲ್ಲಿ ವೀರಶೈವ ಪದ ಬಳಸಿರುವುದನ್ನು ಶರಣರ ವಚನಗಳೇ ನಮ್ಮ ಧರ್ಮಗ್ರಂಥ ಎನ್ನುವ ಪ್ರತ್ಯೇಕ ಧರ್ಮವಾದಿಗಳು ನೋಡಬೇಕು.
ಡಾ| ಮಹಾದೇವ ಸ್ವಾಮೀಜಿ, ಬಬಲೇಶ್ವರ ಬೃಹನ್ಮಠ

Advertisement

Udayavani is now on Telegram. Click here to join our channel and stay updated with the latest news.

Next