Advertisement

ಲಿಂಗಾಯತ ಧರ್ಮ: ಸುಪ್ರೀಂ ಮೊರೆಗೆ ಚಿಂತನೆ

08:30 AM Dec 17, 2018 | Team Udayavani |

ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಚಿಂತನೆ ನಡೆಸಲಾಗುತ್ತಿದೆ. ಪ್ರತ್ಯೇಕ ಧರ್ಮದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Advertisement

ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ತಿರಸ್ಕಾರದ ಪ್ರಸ್ತಾವನೆಯನ್ನು ಪುನರ್‌ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರಕಾರದ ಧಾರ್ಮಿಕ ಖಾತೆ ಸಚಿವರು ನಮಗೆ ಭರವಸೆ ನೀಡಿದ್ದಾರೆ. ಅವರು ಒಂದು ವೇಳೆ ಹೇಳಿದಂತೆ ನಡೆದುಕೊಳ್ಳದಿದ್ದರೆ ನಾವು ಬಜೆಟ್‌ ಅಧಿವೇಶನ ಸಂದರ್ಭದಲ್ಲಿ ಮತ್ತೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಜೈನ ಸಮುದಾಯದವರು ಸುಪ್ರೀಂ ಕೋರ್ಟ್‌ಗೆ ಹೋಗಿ ನ್ಯಾಯ ಪಡೆದುಕೊಂಡಂತೆ ನಾವು ನ್ಯಾಯ ಪಡೆದುಕೊಳ್ಳುತ್ತೇವೆ. ಕೇಂದ್ರ ಸರಕಾರ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರಕಾರ ಕಳುಹಿಸಿದ ಪ್ರಸ್ತಾವನೆ ತಿರಸ್ಕರಿಸಲು ನೀಡಿರುವ ಎರಡು ಕಾರಣಗಳೂ ವಿಚಿತ್ರವಾಗಿವೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದರು. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ತಪ್ಪು ಮಾಹಿತಿಯನ್ನು ಕಾಣದ ಕೈಗಳು ಪ್ರಧಾನಿ ಮೋದಿ ಅವರಿಗೆ  ನೀಡುತ್ತಾ ಕುತಂತ್ರ ನಡೆಸಿದ್ದಾರೆ. ಹಾಗಾಗಿ ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next