Advertisement

Lingayat CM ವಿಚಾರ; ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಸಚಿವ ಈಶ್ವರ ಖಂಡ್ರೆ

05:38 PM Oct 06, 2023 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲವೇ ಇಲ್ಲ. ಹಾಗಾಗಿ ಲಿಂಗಾಯತ ಮುಖ್ಯಮಂತ್ರಿ ಎಂಬ ವಿಷಯ ಕುರಿತು ಚರ್ಚಿಸುವುದು ಎಲ್ಲಿಂದ ಬರುತ್ತದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇದೆಯೇ. ಇಲ್ಲ. ಹಾಗಾಗಿ ಲಿಂಗಾಯತ ಮುಖ್ಯಮಂತ್ರಿ ಎಂಬ ಚರ್ಚೆ ಎಲ್ಲಿಂದ ಬರುತ್ತದೆ. ಸರ್ವರಿಗೂ ಸಮಪಾಲು… ಸರ್ವರಿಗೂ ಸಮಬಾಳು… ಎನ್ನುವ ಬಸವಣ್ಣನವರ ಮಾತಿನ ಪ್ರೇರಣೆಯಂತೆ ಕಾಂಗ್ರೆಸ್ ಸರ್ಕಾರ ಎಲ್ಲ ಜಾತಿ, ಮತ, ಪಂಥ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತಿದೆ. ಒಳ್ಳೆಯ ಮತ್ತು ಜನಪರ ಆಡಳಿತ ನೀಡುತ್ತಿದೆ. ಲಿಂಗಾಯತ ಸಮುದಾಯದ ಅಧಿಕಾರಿಗಳು ಒಳಗೊಂಡಂತೆ ಯಾರಿಗೂ ಯಾವ ಕಾರಣಕ್ಕೂ ಅನ್ಯಾಯವಾಗಿಲ್ಲ. ಅನ್ಯಾಯವಾಗಲು ಬಿಡುವುದೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂಬ ವಿಷಯ ಒಳಗೊಂಡಂತೆ ಬೇರೆ ಯಾವುದೇ ವಿಚಾರಗಳ ಬಗ್ಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಮಹಾ ಅಧಿವೇಶನದ ಪೂರ್ವಭಾವಿ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಬರೀ ಮಹಾ ಅಧಿವೇಶನ ಕುರಿತಾದ ವಿಷಯಗಳ ಬಗ್ಗೆಯೇ ಚರ್ಚೆ ಆಯಿತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next