Advertisement

ಲಿಂಗಾಯತ ಮತ ಬೇಟೆ ನಾಚಿಗೆಗೇಡಿನ ಸಂಗತಿ: ಕೈ ನಾಯಕರಿಗೆ ಬಿಜೆಪಿ ಟಾಂಗ್

03:47 PM Aug 18, 2022 | Team Udayavani |

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿ ಲೆಕ್ಕಾಚಾರ ತೀವ್ರಗೊಂಡಿದ್ದು, ಲಿಂಗಾಯತ ಮತಬ್ಯಾಂಕ್ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮರ ತೀವ್ರವಾಗಿದೆ.

Advertisement

”ಧರ್ಮ ಎಂಬ ಜೇನು ಗೂಡಿಗೆ ಕಾಂಗ್ರೆಸ್‌ ಈ ಹಿಂದೆ ಕೈ ಹಾಕಿ ಸುಟ್ಟುಹೋಗಿತ್ತು.ವೀರಶೈವ, ಲಿಂಗಾಯತ, ಧರ್ಮ, ಜಾತಿ ಎಂಬ ಕಂದಕ ಸೃಷ್ಟಿಸಲು ವಿಫಲ ಯತ್ನ ನಡೆಸಿ ಅಧಿಕಾರ ಕಳೆದುಕೊಂಡಿತು.ಅದೇ ಕಾಂಗ್ರೆಸ್‌ ಈಗ ಲಿಂಗಾಯತ ಮತ ಬೇಟೆ ಎಂಬ ಪ್ರಹಸನ ಮಾಡುತ್ತಿರುವುದು ನಾಚಿಗೆಗೇಡಿನ ಸಂಗತಿ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

”ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಚುನಾವಣೆಯ ನಂತರ ಮಠಾಧೀಶರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದರು. ಚುನಾವಣೆಗೆ ಮೊದಲೊಂದು ಧರ್ಮ, ಚುನಾವಣೆಯ ನಂತರ ಇನ್ನೊಂದು ಧರ್ಮವೇ !!?ಈಗ ಅದೇ ಮಠಗಳಿಗೆ ಯಾವ ಮುಖ ಇಟ್ಟುಕೊಂಡು ಭೇಟಿ ನೀಡುತ್ತಿದ್ದೀರಿ?” ಎಂದು ಬಿಜೆಪಿ ಪ್ರಶ್ನಿಸಿದೆ.

ಅಧಿಕಾರದಲ್ಲಿದ್ದಾಗ ವಿಭಜನೆ ಮಂತ್ರ! ವಿಪಕ್ಷದಲ್ಲಿದ್ದಾಗ ವೀರಶೈವರ ಭಜನೆ!! ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ನಾಯಕರ ಬಣ್ಣ ಬಯಲಾಗುತ್ತಿದೆ! ಎಂದು ಬಿಜೆಪಿ ಕುಟುಕಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next