Advertisement

ಕಾಂಗ್ರೆಸ್ಸಿಗರ ಅಪಪ್ರಚಾರಕ್ಕೆ ಲಿಂಗಾಯತರು ಬಲಿಯಾಗದಿರಿ: ಯಡಿಯೂರಪ್ಪ

08:33 PM Mar 03, 2023 | Team Udayavani |

ಬೀದರ: ಮುಖ್ಯಮಂತ್ರಿ ಸ್ಥಾನಕ್ಕೆ ಸ್ವತಃ ರಾಜೀನಾಮೆ ನೀಡಿದ್ದೇನೆ. ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದೇನೆ ಹೊರತು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿಲ್ಲ. ಈ ವಿಷಯದಲ್ಲಿ ಕಾಂಗ್ರೆಸಿಗರ ಅಪಪ್ರಚಾರಕ್ಕೆ ವೀರಶೈವ ಲಿಂಗಾಯತರು ಬಲಿಯಾಗಬಾರದು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದರು.

Advertisement

ಬಸವಕಲ್ಯಾಣದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಉದ್ದಗಲಕ್ಕೂ ಓಡಾಡಿ ಮತ್ತೂಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿಯುವುದು ಸತ್ಯ. ಯಾವುದೇ ಶಕ್ತಿ ಇದನ್ನು ತಡೆಯಲು ಸಾಧ್ಯವಿಲ್ಲ.

ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡದ ಕಾಂಗ್ರೆಸ್‌ ಈಗ ಹಣ, ಹೆಂಡದ ಬಲದೊಂದಿಗೆ, ಜಾತಿ-ಜಾತಿಗಳ ನಡುವೆ ವಿಷದ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತೇವೆಂದು ತಿರುಕನ ಕನಸು ಕಾಣುತ್ತಿದೆ. ಬಸವಕಲ್ಯಾಣಕ್ಕೆ ಸಾವಿರಾರು ಕೋಟಿ ರೂ. ಮಂಜೂರು ಮಾಡಿಸಿ ಬಸವಣ್ಣನ ಪುಣ್ಯಭೂಮಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಪವಿತ್ರ ಕ್ಷೇತ್ರದ ಚಿತ್ರಣವೇ ಈಗ ಬದಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next