Advertisement

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

12:02 AM Apr 20, 2024 | Team Udayavani |

ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ನಮ್ಮ ಸಮುದಾಯದ ಬಿಎಸ್‌ವೈ ಅವರಿಗೆ ಸಿಗಬೇಕಾಗಿದ್ದ ಸಿಎಂ ಹುದ್ದೆಯನ್ನು ತಪ್ಪಿಸಿ ವಚನಭ್ರಷ್ಟರಾಗಿರುವುದನ್ನು ಜನತೆ ಮರೆತಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದ ಕನಕ ಭವನದಲ್ಲಿ ನಡೆದ ಕಾಂಗ್ರೆಸ್‌ ಬೆಂಬಲಿತ ವೀರಶೈವ ಲಿಂಗಾಯತ ಜನಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿ, 2008ರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರು.

ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ಅಧಿಕಾರ ಅನುಭವಿಸಿದ ಕುಮಾರಸ್ವಾಮಿ ಒಪ್ಪಂದದಂತೆ ಇನ್ನುಳಿದ 20 ತಿಂಗಳ ಅವಧಿಗೆ ಲಿಂಗಾಯತ ಸಮುದಾಯದ ಯಡಿಯೂರಪ್ಪರಿಗೆ ಸಿಎಂ ಸ್ಥಾನ ನೀಡದೆ ದೊಡ್ಡ ಅನ್ಯಾಯವೆಸಗಿ ರಾಜಕೀಯ ವಂಚನೆ ಮಾಡಿರುವುದನ್ನು ಸಮುದಾಯ ಅರಿತುಕೊಳ್ಳಬೇಕೆಂದರು.

 

Advertisement

Udayavani is now on Telegram. Click here to join our channel and stay updated with the latest news.

Next