Advertisement

ಲಿಂಗಾಯಿತರು ಕಾಂಗ್ರೆಸ್‌ ಪರವಾಗಿದ್ದಾರೆ: ದಿಗ್ವಿಜಯ್‌ ಸಿಂಗ್‌ 

12:30 PM Apr 18, 2017 | Team Udayavani |

ಬೆಂಗಳೂರು : ರಾಜ್ಯದಲ್ಲಿ ಲಿಂಗಾಯಿತ ಸಮುದಾಯ ಕಾಂಗ್ರೆಸ್‌ ಪರವಾಗಿದೆ ಎನ್ನುವುದು ಉಪಚುನಾವಣಾ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಮಂಗಳವಾರ ಹೇಳಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಸಹೋದರ, ಸಹೋದರಿಯರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮತದಾರರಿಗೆ ನನ್ನ ಅಭಿನಂದನೆಗಳು’ ಎಂದರು. 

‘ಯಡಿಯೂರಪ್ಪ ಹೇಳುತ್ತಿದ್ದರು ಲಿಂಗಾಯಿತರು ನಮ್ಮೊಂದಿಗೆ ಇದ್ದಾರೆ ಎಂದು. ಆದರೆ ಆ ಸಮುದಾಯದ ಹೆಚ್ಚಿನ ಮತದಾರರಿರುವ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಇದರಿಂದ ಲಿಂಗಾಯಿತರು ಕಾಂಗ್ರೆಸ್‌ ಪರವಾಗಿದ್ದಾರೆ ಎಂದು ಸ್ಪಷ್ಟವಾಗಿದೆ’ ಎಂದರು. 

ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ
ಸದ್ಯ ಡಾ.ಜಿ.ಪರಮೇಶ್ವರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ . ಅಧ್ಯಕ್ಷ ಹುದ್ದೆಗೆ ಯಾವುದೇ ಪೈಪೋಟಿ ಇಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next