Advertisement
ಅಲ್ಲದೇ, ಜನಸಾಮಾನ್ಯರಿಗೂ ಈ ಕುರಿತು ತಿಳಿವಳಿಕೆ ನೀಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಸುಶೀಲಾ ಬಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
Advertisement
ಚುನಾವಣಾ ಆಯೋಗ ಮತದಾರ ಪಟ್ಟಿ ಪರಿಷ್ಕರಣೆಗೆ ಅರ್ಹತಾ ದಿನಾಂಕವನ್ನು ವರ್ಷದಲ್ಲಿ ನಾಲ್ಕು ಬಾರಿ ಪರಿಗಣಿಸಲಿದೆ. ಅಲ್ಲದೇ, ನೋಂದಣಿ, ಪರಿಷ್ಕರಣೆಗೆಕೆಲವು ನಮೂನೆಗಳನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಿದೆ. ಅವುಗಳನ್ನು ಪಾಲಿಸುವ ಮೂಲಕ ಶುದ್ಧ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಬೇಕು ಎಂದರು.ಅರ್ಹ 18 ವರ್ಷ ತುಂಬಿದ ಹೊಸ ಯುವ ಮತದಾರರ ನೋಂದಣಿ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಅಂತಿಮಗೊಳಿಸಬೇಕು. ಮರಣ ಹೊಂದಿದವರು, ಬೇರೆಡೆ ಸ್ಥಳಾಂತರಗೊಂಡವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ, ಅರಣ್ಯವಾಸಿಗಳು, ದಿವ್ಯಾಂಗರನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡಬೇಕೆಂದು ಹೇಳಿದರು. ಮೊಬೈಲ್ನ ಗೂಗಲ್ ಆ್ಯಪ್ ಸ್ಟೋರ್ ನಲ್ಲಿರುವ ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕ 6 ಬಿ ಫಾರ್ಮ್ನಲ್ಲಿ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಗರುಡ ಆ್ಯಪ್ನಲ್ಲಿ ಕಾರ್ಯನಿರ್ವಹಿಸಬೇಕು. ನಿಗದಿಪಡಿಸಿದ ಅವಧಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯಬೇಕೆಂದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಾಗೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಾಂಬ್ಳೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಭರಮಪ್ಪ, ಡಾ|ಜಿ. ಎಸ್. ಪಲ್ಲೇದ, ಮುಖ್ಯ ತರಬೇತುದಾರ ಬಸವರಾಜ ಗಿರಿತಿಮ್ಮಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.