ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚನೆ ನೀಡಿದರು.
Advertisement
ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
Related Articles
Advertisement
10ರೊಳಗೆ ಮಾಹಿತಿ ಕಡ್ಡಾಯ: ವಿಧಾನಸಭಾ ಚುನಾವಣೆ ಮುಗಿದು ಮೂರು ತಿಂಗಳು ಕಳೆದಿದೆ. ಇನ್ನೂ ಚುನಾವಣಾ ವೆಚ್ಚದ ಬಗ್ಗೆ ಮಾಹಿತಿ ನೀಡಿಲ್ಲವೆಂದರೆ ಅರ್ಥವೇನು ಎಂದು ಪ್ರಶ್ನಿಸಿದ ಡೀಸಿ, ಆ.10ರ ಒಳಗಾಗಿ ಮಾಹಿತಿಯನ್ನುಪ್ರತಿಯೊಬ್ಬರೂ ಕಡ್ಡಾಯವಾಗಿ ಸಲ್ಲಿಸಲೇಬೇಕು. ಈಗಾಗಲೇ ಚುನಾವಣಾ ಆಯೋಗ ದಿನಾಂಕ ನಿಗಪಡಿಸಿದ್ದು, ಆ ವೇಳೆ ಮಾಹಿತಿ ನೀಡದಿದ್ದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈಗಾಗಲೇ 18 ವರ್ಷ ತುಂಬಿದ್ದು, ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಫಾರಂ.6 ಅನ್ನು ಭರ್ತಿ ಮಾಡಿ ಬಿಎಲ್ಒ ಅಥವಾ ತಹಶೀಲ್ದಾರರಿಗೆ ನೀಡಬಹುದಾಗಿದೆ. ಕಾರಣಾಂತರಗಳಿಂದ ಮರಣ ಹೊಂದಿದ್ದರೆ ಅಥವಾ ಬೇರೆಡೆಗೆ ವರ್ಗಾವಣೆಯಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಅಥವಾ ತೆಗೆದು ಹಾಕುವುದಕ್ಕೆ ಫಾರಂ ನಮೂನೆ 7 ಅನ್ನು ಭರ್ತಿ ಮಾಡಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಹುಟ್ಟಿದ ದಿನಾಂಕ, ತಂದೆ, ಗಂಡ ಹೆಸರು ಸೇರಿದಂತೆ ಯಾವುದೇ ತಿದ್ದುಪಡಿಗಳಿದ್ದರೆ ಫಾರಂ.8ರ ಮೂಲಕ ಸಲ್ಲಿಸಬೇಕಿದೆ. ಒಂದೇ ವಿಧಾನಸಭಾ ಕ್ಷೇತ್ರದಲ್ಲಿದ್ದು, ಪಟ್ಟಿಯಲ್ಲಿ ಹೆಸರಿದ್ದು, ವಿಳಾಸ ಬದಲಾಗಿದ್ದರೆ ಅಂತಹವರು ಫಾರಂ 18 ಅನ್ನು ಭರ್ತಿ ಮಾಡಿ ನೀಡಬೇಕು. ಈ ಎಲ್ಲದಕ್ಕೂ ಅಕ್ಟೋಬರ್ 10ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಚುನಾವಣಾ ಶಾಖೆ ಚುರುಕುಗೊಳ್ಳಲಿ: ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಚುನಾವಣಾ ಶಾಖೆಯವರು ಚುರುಕುಗೊಂಡು ಕೆಲಸ ಮಾಡಬೇಕಿದೆ. ಅದನ್ನು ಬಿಟ್ಟು, ಬರುವ ಮಾಹಿತಿಯನ್ನು ಮೂಟೆ ಕಟ್ಟಿ ಬಿಸಾಡಿಸದರೆ ಮುಲಾಜಿಲ್ಲದೇ ಮನೆಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಉಪವಿಭಾಗಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಚುನಾವಣೆ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ದೂರುಗಳಿದ್ದು, ಸರಿಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು. ದೂರು ಬಂದರೆ ಗ್ರಹಚಾರ ಬಿಡಿಸ ಬೇಕಾಗುತ್ತೆ: ಡೀಸಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಕಾಟಾಚಾರಕ್ಕೆ
ಮನಬಂದಂತೆ ಬೂತ್ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುವಂತಿಲ್ಲ. ಪ್ರತಿ ದಿನ ಮಾಹಿತಿ ಪಡೆದುಕೊಂಡರೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ ಡೀಸಿ, ಹೊಸ ಮತದಾರರಿಗೆ ಸಂಬಂಧಿಸಿದಂತೆ ಮನೆ ಮನೆ ಭೇಟಿಗೂ ಮುನ್ನ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಪರೀಕ್ಷೆಗಳಿಗೆ ಎಷ್ಟು ಮಂದಿ ಹಾಜರಾಗುತ್ತಿದ್ದಾರೆ ಎಂಬ ಮಾಹಿತಿಯನ್ನು ಡಿಡಿಪಿಯು ಅವರಿಂದ ಪಡೆದುಕೊಂಡರೆ ಅಂದಾಜು ಸಂಖ್ಯೆಯಾದರೂ ಸಿಗುತ್ತದೆ. ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ್ದರೂ ನಿರ್ಲಕ್ಷ್ಯವಹಿಸಿದ್ದೇ ಆದಲ್ಲಿ ಇಡೀ ರಾತ್ರಿ ಜಾಗರಣೆ ಮಾಡಿಸಿ ಕೆಲಸ ಮಾಡಿಸಬೇಕಾಗುತ್ತದೆ. ನಾನೂ ಅನಿರೀಕ್ಷಿತವಾಗಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತೇನೆ. ಯಾರಾದರೂ ತಮ್ಮ ಮನೆಗೆ ಅಧಿಕಾರಿಗಳು ಬಂದಿಲ್ಲ ಎಂದು ಹೇಳಿದರೆ ಸಂಬಂಧಪಟ್ಟ ಬಿಎಲ್ಒಗಳು ಸೇರಿದಂತೆ ಅಧಿಕಾರಿಗಳಿಗೆ ಗ್ರಹಚಾರ ಬಿಡಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಎಚ್ಚರಿಸಿದರು. 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಎಲ್ಒಗಳು ಪ್ರತಿ ಮನೆಗೆ ತೆರಳಿ 2019ರ ಜ.1ಕ್ಕೆ 18 ವರ್ಷ ತುಂಬಿದವರ ಮಾಹಿತಿಯನ್ನು ಕಲೆ ಹಾಕಿ, ನೋಂದಣಿ ಮಾಡಬೇಕು.
ಜೆ.ಮಂಜುನಾಥ್, ಜಿಲ್ಲಾಧಿಕಾರಿ