Advertisement

ಸರ್ಕಾರದ ಸೌಲಭ್ಯ ಕೇಳಿ ಪಡೀರಿ: ಅಲ್ಲಾಭಕ್ಷ್

09:44 AM Jan 30, 2019 | Team Udayavani |

ಚಿತ್ರದುರ್ಗ: ಅವಕಾಶ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಕೇಳಿ ಪಡೆಯಬೇಕು ಎಂದು ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಅಲ್ಲಾಭಕ್ಷ್ ಹೇಳಿದರು.

Advertisement

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಹಿಂದುಳಿದವರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್‌ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ಸರ್ಕಾರದ ಹತ್ತು ಹಲವಾರು ಯೋಜನೆಗಳಿಗಾಗಿ ಅರ್ಜಿ ಸಲ್ಲಿಸುವವರನ್ನು ಸಂಬಂಧಪಟ್ಟ ಇಲಾಖೆಗೆ ಕರೆದುಕೊಂಡು ಹೋಗಿ ಸರ್ಕಾರದ ಸವಲತ್ತುಗಳನ್ನು ದೊರಕಿಸುವ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಈಗಿನ ಸಮ್ಮಿಶ್ರ ಸರ್ಕಾರದಲ್ಲೂ ಮುಂದುವರೆಯುತ್ತಿವೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಚಾಂದ್‌ಪೀರ್‌, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್‌ ಅಧ್ಯಕ್ಷ ಹಸನ್‌ ತಾಹೀರ್‌, ನಾಸಿರುದ್ದಿನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next