Advertisement

ಸೆ.29ರಂದು ಸಾಹಿತ್ಯ ಸಮ್ಮೇಳನ ದಿನ ನಿಗದಿ

11:27 PM Aug 18, 2019 | Team Udayavani |

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಹಾಗೂ ಸಿದ್ಧತೆ ಕುರಿತು ಸೆ.29ರಂದು ನಡೆಯಲಿರುವ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರವಾಗಲಿದೆ.

Advertisement

ಕೋಲಾರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಕಸಾಪ ಕೇಂದ್ರ ಪರಿಷತ್‌ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್‌ ಕಾರ್ಯಕಾರಿಣಿ ಸಭೆಯಲ್ಲಿ ಕಲಬುರಗಿಯಲ್ಲಿ ನಿಗದಿಯಾಗಿರುವ ಸಮ್ಮೇಳನದ ಕುರಿತಾಗಿ ಚರ್ಚಿಸ ಲಾಯಿತು. ಚರ್ಚೆ ನಂತರ ಸಮ್ಮೇಳನದ ದಿನಾಂಕವನ್ನು ಸೆ.29ರಂದು ಚಾಮರಾಜನಗರದಲ್ಲಿ ನಡೆಯಲಿರುವ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದಿಂದ ಅಂತಿಮಗೊಳಿಸಲು ನಿರ್ಧರಿಸಲಾಯಿತು.

ಚಾಮರಾಜನಗರ ದಲ್ಲಿ ನಡೆಯಲಿರುವ ಕಸಾಪ ಕಾರ್ಯಕಾರಣಿಯಲ್ಲಿ ಸಮ್ಮೇಳನದ ದಿನಾಂಕ ಪ್ರಕಟಗೊಂಡ ನಂತರ ಕಲಬುರಗಿ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳು ಆರಂಭವಾಗಲಿವೆ. ಸಮ್ಮೇಳನ ಸಂಬಂಧ ಇಷ್ಟೊತ್ತಿಗೆ ಎರಡ್ಮೂರು ಪೂರ್ವಭಾವಿ ಸಭೆ ನಡೆದು ಸ್ವಾಗತ ಸಮಿತಿ ರಚನೆಯಾಗಬೇಕಿತ್ತು. ಆದರೆ, ಸರ್ಕಾರ ಬದಲಾವಣೆ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯಕ್ಕೆ ಹಿನ್ನಡೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next