Advertisement

ಈ ಬಾರಿ ದಸರಾ ಉದ್ಘಾಟನೆಗೆ ಎಸ್. ಎಲ್. ಭೈರಪ್ಪ: ಯಡಿಯೂರಪ್ಪ ಘೋಷಣೆ

12:31 PM Aug 15, 2019 | Hari Prasad |

ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿ ಖ್ಯಾತ ಸಾಹಿತಿ ಮತ್ತು ಹಿರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಉತ್ಸವದ ಕುರಿತಾಗಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಕರ್ನಾಟಕದ ಬಹುಭಾಗ ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಹಿನ್ನಲೆಯಲ್ಲಿ ಈ ಬಾರಿ ಸರಳ ಮಾದರಿಯ ದಸರಾ ಆಚರಣೆಗೂ ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಾಹಿತಿ ಎಸ್. ಎಲ್. ಭೈರಪ್ಪನವರಿಗೆ ಆಹ್ವಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.


ಇಂದಿನ ಈ ಸಭೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಶ್ರೀನಿವಾಸ ಪ್ರಸಾದ್, ತನ್ವೀರ್ ಸೇಠ್, ರಾಮ್ ದಾಸ್, ಎನ್.ಮಹೇಶ್, ಯತೀಂದ್ರ, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ನಾಗರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ.ಸಿ.ಕಳಸದ್ ಹಾಗೂ ಮೈಸೂರು ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next