Advertisement
ಶಾಲಾ, ಕಾಲೇಜು, ಅಂಚೆ ಕಚೇರಿ, ಬ್ಯಾಂಕ್, ಎಲ್ಐಸಿ ಜತೆಗೆ ಇತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳು ಮುಚ್ಚಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಹಾಗೂ ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
Related Articles
Advertisement
ದೇಶವನ್ನು ಬೆಲೆ ಏರಿಕೆಯಿಂದ ರಕ್ಷಿಸುತ್ತೇವೆ. ಅಚ್ಛೇ ದಿನ್ ಬರಲಿದೆ ಎನ್ನುತ್ತಲೇ ದೇಶದ ಜನರ ಶೋಷಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲಾಗುತ್ತದೆ ಎಂದು ಮೋದಿ ನೀಡಿದ ಭರವಸೆ ಇಂದಿಗೂ ಈಡೇರಿಲ್ಲ. ಉದ್ಯೋಗ ನೀಡುವುದು ಹೋಗಲಿ, ಕಾರ್ಮಿಕ ಮತ್ತು ನೌಕರ ವರ್ಗದ ನಿಯಂತ್ರಣ ಸೇರಿದಂತೆ ದುಡಿಯುವ ಜನರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶದ ಕೋಟ್ಯಾಂತರ ಕುಟುಂಬಗಳು ಜೀವನದ ಆಧಾರವಾಗಿದ್ದ ಉದ್ಯೋಗ ಕಳೆದುಕೊಂಡು ಬೀದಿಪಾಲಾಗಿವೆ.
ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನರೇಗಾ ಯೋಜನೆಯ ಅನುದಾನ ಕಡಿತ ಮಾಡಲಾಗಿದೆ ಎಂದು ಕಿಡಿ ಕಾರಿದರು. ಎಐಟಿಯುಸಿ., ಐಎನ್ಟಿಯುಸಿ, ಬಿಸಿಯೂಟ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು, ಕೆನರಾ ಬ್ಯಾಂಕ್ ಸೇರಿದಂತೆ ಮತ್ತಿತರ ಬ್ಯಾಂಕುಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.