Advertisement

ಬದುಕಿ ಬಾ ಕಾವೇರಿ; ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕಿ

10:02 PM Apr 22, 2017 | Team Udayavani |

ಬೆಳಗಾವಿ:  6 ವರ್ಷದ ಬಾಲಕಿಯೊಬ್ಬಳು ತೆರೆದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದ ಘಟನೆ ಆಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ.

Advertisement

ಕಾವೇರಿ ಮಾದರ ಬಾಲಕಿ ಶಂಕರ್ ಹಿಪ್ಪರಗಿ ಅವರ ಹೊಲದಲ್ಲಿ ಆಟವಾಡುತ್ತಿದ್ದ ಸಂಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ತೆರೆದ ಕೊಳವೆ ಬಾವಿಯೊಳಗೆ ಬಿದ್ದಿರುವ ವರದಿಯಾಗಿದೆ.

ಬಾಲಕಿಯು ಸುಮಾರು 30 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆದಿದೆ. ಅಗ್ನಿಶಾಮಕ ದಳ, ಪೊಲೀಸ್‌ ಪಡೆ ಹಾಗೂ ವೈದ್ಯಕೀಯ ತಂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಬಾಲಕಿಗೆ ಉಸಿರಾಡಲು ಅನುಕೂಲವಾಗುವಂತೆ ಕೊಳವೆ ಬಾವಿಯಲ್ಲಿ ಪೈಪ್‌ಗ್ಳ ಮೂಲಕ ಆಮ್ಲಜನಕನ್ನು ಪೂರೈಸಲಾಗುತ್ತಿದೆ.

ಹೊಲದ ಮಾಲೀಕರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಎರಡು ತಿಂಗಳಿಂದ ಕೊಳವೆ ಬಾವಿಯನ್ನು ಹಾಗೆಯೇ ಬಿಟ್ಟಿದ್ದ ಶಂಕರ ಹಿಪ್ಪರಗಿ ಈಗಷ್ಟೇ ಕೇಸಿಂಗ್‌ ಪೈಪ್‌ ಅಳವಡಿಸಲು ಮುಂದಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next