Advertisement

Mangaluru ಜಾನುವಾರು ವಿಮೆ ಯೋಜನೆ: ಶೇ. 70ರಷ್ಟು ಸಹಾಯಧನ

01:08 AM Nov 09, 2023 | Team Udayavani |

ಮಂಗಳೂರು: ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯಡಿ ಎಸ್‌ಸಿಪಿ/ಟಿಎಸ್‌ಪಿ ಉಳಿಕೆಯಾಗಿರುವ ಅನುದಾನದಲ್ಲಿ ವಿಮೆ ಒದಗಿಸಲಾಗುತ್ತದೆ.

Advertisement

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1 ವರ್ಷ, 2 ವರ್ಷ ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದು. ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ. 70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಗ್ರಾ.ಪಂ. ಮಟ್ಟದಲ್ಲಿರುವ ಪಶು ಸಖೀಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next