Advertisement

ತೆರೆದ ಬಾಕ್ಸ್ ಚರಂಡಿಗೆ ಬಿದ್ದ ಜಾನುವಾರು:ಹೆದ್ದಾರಿ ಪ್ರಾಧಿಕಾರದ ಮೇಲೆ ಸಾರ್ವಜನಿಕರು ಆಕ್ರೋಶ

07:14 PM Jan 08, 2022 | Team Udayavani |

ಕೊಟ್ಟಿಗೆಹಾರ: ಹೆದ್ದಾರಿ ಅಗಲೀಕರಣದ ಭಾಗವಾಗಿ‌ ಕೊಟ್ಟಿಗರಹಾರದ ರಸ್ತೆ ಇಬ್ಬದಿಯಲ್ಲಿ ಬಾಕ್ಸ್ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದ್ದು ಕೆಲವೆಡೆ ಬಾಕ್ಸ್ ಚರಂಡಿಯನ್ನು ಮುಚ್ಚದೇ ಇರುವುದರಿಂದ ಜಾನುವಾರೊಂದು ಬಾಕ್ಸ್ ಚರಂಡಿಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.

Advertisement

ಜಾನುವಾರೊಂದು ಬಾಕ್ಸ್ ಚರಂಡಿಗೆ ಬಿದ್ದು ಹೊರ ಬರಲಾಗದೇ ಒದ್ದಾಡುತ್ತಿದ್ದು ಸ್ಥಳೀಯರು ಹರಸಾಹಸ ಪಟ್ಟು ಜಾನುವಾರನ್ನು ಹೊರ ತೆಗೆದಿದ್ದಾರೆ.

ಬಾಕ್ಸ್ ಚರಂಡಿ ಕಾಮಗಾರಿ‌ ಮುಗಿದು ಹಲವು ಕಾಲವಾದರೂ ಕೂಡ ಕೆಲವೆಡೆ ಬಾಕ್ಸ್ ಚರಂಡಿಗಳನ್ನು ಮುಚ್ಚಿಲ್ಲ. ಇದರಿಂದ ನಾಯಿ, ಹಸು ಮುಂತಾದ ಪ್ರಾಣಿಗಳು ಬಾಕ್ಸ್ ಚರಂಡಿಯೊಳಗೆ ಬೀಳುತ್ತಿದ್ದು ಹೆದ್ದಾರಿ ಪ್ರಾಧಿಕಾರ ಬಾಕ್ಸ್ ಚರಂಡಿಯನ್ನು ಮುಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next