Advertisement

ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪವೇ ಇಲ್ಲ: ಸಚಿವ ಸುನಿಲ್ ಕುಮಾರ್

04:38 PM Mar 25, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಪರಿಸ್ಥಿತಿ ಇಲ್ಲ. ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪವು ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Advertisement

ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಕೆಲವೆಡೆ ಲೋಡ್ ಶೆಡ್ಡಿಂಗ್ ಆಗಿರುವುದು ಗಮನಕ್ಕೆ ಬಂದಿದೆ. ಅಭಿವೃದ್ಧಿ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಬೆಂಗಳೂರು ಸೇರಿದಂತೆ ಇತರೆಡೆ ಎಲ್ಲಿಯೂ ಲೋಡ್ ಶೆಡ್ಡಿಂಗ್ ಆಗದಂತೆ ಕ್ರಮ ವಹಿಸಲಾಗುವುದು ಎಂದರು.

ಇದನ್ನೂ ಓದಿ:ಮುಸ್ಲಿಂ ಸಮುದಾಯದಲ್ಲಿ ಮತಾಂಧ ಶಕ್ತಿಗಳು ತಲೆಯೆತ್ತಲು ಕಾಂಗ್ರೆಸ್ ಕಾರಣ: ಆರಗ ಜ್ಞಾನೇಂದ್ರ

ಎರಡು ದಿನಗಳ ಹಿಂದೆ ವಿಧಾನ ಪರಿಷತ್ ಕಲಾಪದಲ್ಲೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ನ ಹರೀಶ್ ಕುಮಾರ್, ‘’ಬೇಸಿಗೆ ಕಾಲ ಶುರುವಾಗಿದೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಸರ್ಕಾರ ಕೂಡಲೇ ಕಲ್ಲಿದ್ದಲಿನ ಕೊರತೆ ನೀಗಿಸಿಕೊಳ್ಳಬೇಕು’ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next