Advertisement

ಹುಣಸೂರು: ಕೃಷಿ ಚಟುವಟಿಕೆಗಾಗಿ ಮಾಡಿಕೊಂಡಿದ್ದ ಸಾಲ ತೀರಿಸಲಾಗದ ರೈತರೊಬ್ಬರು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡುವೆಪುರದಲ್ಲಿ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ಲೇ.ಗಿರಿಗೌಡರ ಪುತ್ರ ಯಾಲಕ್ಕಿಗೌಡ(65) ಮೃತರು. ಇವರಿಗೆ ಪತ್ನಿ, ಮೂರು ಗಂಡು, ನಾಲ್ವರು ಹೆಣ್ಣು ಮಕ್ಕಳಿದ್ದಾರೆ.

ಆಗಿರೋದಿಷ್ಟು
ಮೃತ ಯಾಲಕ್ಕಿಗೌಡರಿಗೆ ಮೂರು ಎಕರೆ ಜಮೀನಿದ್ದು, ತಂಬಾಕು ಬ್ಯಾರನ್ ಹೊಂದಿದ್ದಾರೆ. ಇವರು ಹೊಗೆಸೊಪ್ಪು, ಶುಂಠಿ ಬೆಳೆ ಬೆಳೆದಿದ್ದರು. ಕೃಷಿ ಚಟುವಟಿಕೆಗಾಗಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿಯ ಐಓಬಿ ಬ್ಯಾಂಕಿನಲ್ಲಿ 12 ಲಕ್ಷರೂ, ಗ್ರಾಮದಲ್ಲಿ6 ಲಕ್ಷರೂ ಕೈ ಸಾಲ ಮಾಡಿಕೊಂಡಿದ್ದು, ಕಳೆದ ಮರ‍್ನಾಲ್ಕು ವರ್ಷಗಳಿಂದ ಬೆಳೆ ಕೈಹತ್ತದೆ. ಸಾಲ ತೀರಿಸಲಾಗದೆ ಆತಂಕಕ್ಕೊಳಗಾಗಿದ್ದ ಇವರು ಸೋಮವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಕೆಂಪರಾಜು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹನಗೋಡು ಆಸ್ಪತ್ರೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೊಪ್ಪಿಸಲಾಯಿತು. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಇತ್ತು ಮಹಜರು ನಡೆಸಿದರು. ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next