Advertisement
ಜೆ.ಪಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ ‘ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಬಳಿಕ ಸಾಲಮನ್ನಾ ಮಾಡುತ್ತೇವೆ. ನಾನೊಬ್ಬನೆ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ’ ಎಂದರು.
ರಾಜ್ಯದ ಬೇರೆ, ಬೇರೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದು ನಾನಿಂದು ದೆಹಲಿಗೆ ತೆರಳುತ್ತಿಲ್ಲ ಎಂದು ತಿಳಿಸಿದರು.
Related Articles
Advertisement
‘ಅವರಿವರ ಮನೆ ಒಡೆಯುವುದು ಬಿಟ್ಟು ಯಡಿಯೂರಪ್ಪ ಅವರಿಗೆ ಬೇರೆ ಕೆಲಸ ಏನಿದೆ? ಮಹಾನ್ ನಾನೊಬ್ಬನೇ ದೇಶ ಉದ್ಧಾರ ಮಾಡುವುದು ಅಂತ ತಿಳಿದುಕೊಂಡಿದ್ದಾರೆ. ಇಂತಹ ಆಟಗಳನ್ನು ರಾಜ್ಯದ ಜನ ಬೆಂಬಲಿಸಬಾರದು’ ಎಂದರು.
ಬಿಜೆಪಿ ಬಂದ್ ಕರೆ ಕುಮಾರಸ್ವಾಮಿ ಅವರು ಸಾಲಮನ್ನಾ ಘೋಷಣೆ ಮಾಡದಿದ್ದಲ್ಲಿ ಸೋಮವಾರ ರಾಜ್ಯ ಬಂದ್ ಮಾಡಿ ಹೋರಾಟ ಮಾಡುವ ಎಚ್ಚರಿಕೆಯನ್ನು ಬಿಜೆಪಿ ನೀಡಿದೆ.