Advertisement

24 ಗಂಟೆಗಳಲ್ಲಿ ರೈತರಿಗೆ ಸಾಲ ಮನ್ನಾ ಸೌಲಭ್ಯ: ಸಿಎಂ

11:10 AM Mar 08, 2020 | Sriram |

ಹಾವೇರಿ: ಈ ಹಿಂದಿನ ಮೈತ್ರಿ ಸರಕಾರ ಮಾಡಿದ ಸಾಲ ಮನ್ನಾಕ್ಕೆ ಸಂಬಂಧಿಸಿ ರೈತರ ಅರ್ಹತಾ ಪತ್ರಗಳ ಪರಿಶೀಲನೆ ನಡೆದಿದೆ. ರೈತರು ದಾಖಲೆ ಕೊಟ್ಟ 24 ಗಂಟೆಗಳಲ್ಲೇ ಸಾಲ ಮನ್ನಾ ಸೌಲಭ್ಯ ಕೊಡಿಸುತ್ತೇವೆ.ಈ ಬಗ್ಗೆ ಯಾರೂ ಅನುಮಾನ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದರು.

Advertisement

ಹಿರೇಕೆರೂರ ತಾಲೂಕಿನ ದೂದೀಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆವರಣದಲ್ಲಿ 330 ಕೋ.ರೂ.ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದೇ ನಮ್ಮ ಸಂಕಲ್ಪ. ರೈತರ ಹೊಲಕ್ಕೆ ನೀರು, ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಟ್ಟಾಗ ಮಾತ್ರ ರೈತ ನೆಮ್ಮದಿ, ಗೌರವ ಮತ್ತು ಸ್ವಾಭಿಮಾನದಿಂದ ಬಾಳಿ ಬದುಕಲು ಸಾಧ್ಯ ಎಂಬುದು ನನಗೆ ಗೊತ್ತಿದೆ.ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಹಣಕಾಸಿನ ಇತಿಮಿತಿಯಲ್ಲೇ ಬಜೆಟ್‌ನಲ್ಲಿ ರಾಜ್ಯದ ರೈತರಿಗೆ ಕೊಡುಗೆ ಕೊಡುವ ಮೂಲಕ 5,000 ಕೋ. ರೂ. ಗಳನ್ನು ಏತ ನೀರಾವರಿ ಯೋಜನೆಗೆ ತೆಗೆದಿರಿಸಿದ್ದೇವೆ. ಆ ಮೂಲಕ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡಬೇಕೆಂಬ ಸಂಕಲ್ಪದೊಂದಿಗೆ ಹೆಜ್ಜೆ ಇಟ್ಟಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next