Advertisement

ಕೋವಿಡ್ ನಿಂದ ಮೃತ ರೈತರ ಸಾಲ ಮನ್ನಾ : 1 ಲಕ್ಷ ರೂ. ಸಾಲ ಮನ್ನಾ ಮಾಡಲು ನಿರ್ಧಾರ

12:36 AM Jul 07, 2021 | Team Udayavani |

ಕಡೂರು/ಮೈಸೂರು : ಸಹಕಾರಿ ಸಂಘಗಳ ಸದಸ್ಯರಾಗಿದ್ದು ಕೊರೊನಾದಿಂದ ಮೃತಪಟ್ಟಿದ್ದರೆ ಅಂಥವರ ಸಾಲ ಮನ್ನಾ ಮಾಡಲಾಗುವುದು ಎಂದು ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿ ಪ್ರಕಾಶ್‌ ಹೇಳಿದ್ದಾರೆ.

Advertisement

ಗರಿಷ್ಠ 1 ಲಕ್ಷ ರೂ.ಗಳ ಸಾಲ ಮನ್ನಾ ಮಾಡಲಾಗುವುದು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್‌ನಿಂದ ಮೃತಪಟ್ಟಿರುವ ರೈತ ಕುಟುಂಬದ ಸದಸ್ಯರು ಸಮೀಪದ ಡಿಸಿಸಿ ಬ್ಯಾಂಕ್‌ಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಕೊರೊನಾದಿಂದ ಮೃತಪಟ್ಟ ಸಹಕಾರಿಗಳ ಸಾಲ ಮನ್ನಾ ಮಾಡುವ ಬಗ್ಗೆ ಚಿಂತಿಸಿದ್ದು, ಶೀಘ್ರವೇ ಅವರ ಸಾಲಮನ್ನಾ ಮಾಡುವ ಕಾರ್ಯಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ.
– ಎಸ್‌.ಟಿ. ಸೋಮಶೇಖರ್‌, ಸಹಕಾರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next