Advertisement

ಪತ್ನಿ ಎದುರಲ್ಲೇ ಬಿಜೆಪಿ ಮುಖಂಡನ ಬರ್ಭರ ಹತ್ಯೆ

10:59 AM Oct 14, 2019 | Mithun PG |

ಪಶ್ಚಿಮ ಬಂಗಾಳ: ಬಿಜೆಪಿ ಮುಖಂಡನೋರ್ವನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಹರಲಾ ದೇಬ್ ನಾಥ್ (55) ಕೊಲೆಯಾದ ಬಿಜೆಪಿ ಸ್ಥಳೀಯ ಮುಖಂಡ.  ದಿನಸಿ ವ್ಯಾಪಾರಿಯಾಗಿದ್ದ ದೇಬ್ ನಾಥ್,  ರಾತ್ರಿ  10 ಗಂಟೆಯ ವೇಳೆಯಲ್ಲಿ ತಮ್ಮ ಪತ್ನಿಯೊಂದಿಗೆ ಅಂಗಡಿಯಲ್ಲಿದ್ದರು. ಈ ವೇಳೆ ವ್ಯಾಪರಕ್ಕೆಂದು ಬಂದಿದ್ದ ಇಬ್ಬರು  ಏಕಾಏಕಿ ಗುಂಡು ಹಾರಿಸಿದ್ದಾರೆ. ಪತ್ನಿ ಎದುರಲ್ಲೇ  ದೇಬ್ ನಾಥ್ ಕೊನೆಯುಸಿರೆಳೆದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡ್ಯೊಯ್ಯಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕೃತ್ಯದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ.  ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಡಿಯಾ ಬಿಜೆಪಿ ಜಿಲ್ಲಾಧ್ಯಕ್ಷ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next