Advertisement

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಸಾಧನೆ ಕಡಿಮೆಯಲ್ಲ; ಉಗ್ರಪ್ಪ

08:21 PM Sep 07, 2021 | Team Udayavani |

ಬೆಂಗಳೂರು: ಮೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಒಟ್ಟು 269 ಸ್ಥಾನಗಳ ಪೈಕಿ ಬಿಜೆಪಿ ಪಡೆದಿರುವುದು 114 ಸ್ಥಾನ ಮಾತ್ರ, ಕಾಂಗ್ರೆಸ್‌ 100 ಸ್ಥಾನದಲ್ಲಿ ಗೆದ್ದಿದೆ ಎಂದು ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿಯ ಹಣ, ಅಧಿಕಾರ ದುರ್ಬಳಕೆಯಿಂದ 114 ಸ್ಥಾನ ಪಡೆದಿದ್ದು, ಪ್ರಚಾರ ನಡೆಸಲು ಅವಕಾಶ ಕೊಡದಿದ್ದರೂ ಹೋರಾಟ ಮಾಡಿದ ಕಾಂಗ್ರೆಸ್‌ 100 ಸ್ಥಾನದಲ್ಲಿ ಗೆದ್ದಿದೆ. ನಮಗೂ ಹಾಗೂ ಬಿಜೆಪಿಗೂ ಇರುವ ಅಂತರ ಕೇವಲ 14 ಸ್ಥಾನ ಅಷ್ಟೇ ಎಂದು ತಿಳಿಸಿದರು.

ಏಪ್ರಿಲ್‌ ನಲ್ಲಿ ನಡೆದ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಿತ್ತು. ಸರ್ಕಾರ ಏನೆಲ್ಲ ಪ್ರಯತ್ನ ಮಾಡಿದರೂ ಅವರ ನಿರೀಕ್ಷೆಗೆ ತಕ್ಕಂತೆ ಜನರ ಬೆಂಬಲ ಸಿಕ್ಕಿಲ್ಲ ಎಂಬುದು ಈಗಿನ ಚುನಾವಣೆಯಲ್ಲಿ ಸಾಬೀತಾಗಿದೆ ಎಂದು ಹೇಳಿದರು.

ನಳೀನ್‌ ಕುಮಾರ್‌ ಕಟೀಲ್‌, ಸಿ.ಟಿ ರವಿ ಸೇರಿದಂತೆ ಬಿಜೆಪಿ ನಾಯಕರು ಬೆಲೆ ಏರಿಕೆ ವಿಚಾರವಾಗಿ ಜನರನ್ನು ದಾರಿ ತಪ್ಪಿಸುವ ಸಂಚು ರೂಪಿಸುತ್ತಿದ್ದಾರೆ. ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಗೆ ಕಾಂಗ್ರೆಸ್‌ ನೀಡಿದ ತೈಲ ಬಾಂಡ್‌ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಸವಾಲು ಹಾಕುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಇರುವೆಯ ಹಲ್ಲಿನ ರಹಸ್ಯ ಬಯಲು! ಸತುವಿನ ಅಣುಗಳಿಂದಲೇ ಇರುವೆಗೆ ಸೂಪರ್‌ ಪವರ್‌

Advertisement

ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮಾತನಾಡಿ, ಬಿಜೆಪಿಯವರ ಭಂಡತನ ಹೇಗಿದೆ ಎಂದರೆ, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದ ಜನ ಬೆಲೆ ಏರಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಊಟ, ಪೂಜೆ ಮಾಡುತ್ತಿದ್ದಾರೆ ಎಂದು ಕಟೀಲ್‌ ಹಾಗೂ ರವಿಕುಮಾರ್‌ ಹೇಳಿದ್ದಾರೆ. ಇವರಿಗೆ ಏನು ಹೇಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌, ಸ್ಕಾಲರ್‌ ಶಿಪ್‌ ಎಲ್ಲವೂ ನಿಂತಿದೆ. ವಿದ್ಯೆಗೆ ಅವಕಾಶ ಇಲ್ಲವಾಗಿದೆ. ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳು ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ನೀಡುವ ಹಣ ನಿಂತಿದೆ ಎಂದು ದೂರಿದರು.

 

Advertisement

Udayavani is now on Telegram. Click here to join our channel and stay updated with the latest news.

Next