Advertisement

ಐತಿಹಾಸಿಕ ಬಾವಿಯಲ್ಲಿ ಆಯತಪ್ಪಿ ಬಿದ್ದು ಪೊಲೀಸ್‌ ಪೇದೆ ಸಾವು

08:24 PM Sep 23, 2022 | Team Udayavani |

ಕನಕಗಿರಿ: ಸ್ಥಳೀಯ ಐತಿಹಾಸಿಕ ಸ್ಮಾರಕ ವೆಂಕಟಪತಿ ಬಾವಿ ಬಳಿ ವಿಶ್ರಾಂತಿ ಪಡೆಯಲೆಂದು ತೆರಳಿದ್ದ ವೇಳೆ ಆಯತಪ್ಪಿ ಪೊಲೀಸ್‌ ಪೇದೆಯೋರ್ವರು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ನಡೆದಿದೆ.

Advertisement

ಇದನ್ನೂ ಓದಿ:ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಪಟ್ಟಣದ  ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪುತ್ರಪ್ಪ ಗುಳೇದಗುಡ್ಡ(40) ಮೃತ ದುರ್ದೈವಿ.

ಎಪಿಎಂಸಿ ಆವರಣದಲ್ಲಿರುವ ವೆಂಕಟಪತಿ ಬಾವಿಯ ಬಳಿ ಸಂಜೆ ವೇಳೆ ವಿಶ್ರಾಂತಿ ಪಡೆಯಲು ತೆರಳಿದ್ದಾಗ  ಶಿವಪುತ್ರ‌ ಅವರು ಆಯಾತಪ್ಪಿ ಬಾವಿಗೆ ಬಿದ್ದಿದ್ದಾರೆ. ಸ್ಥಳದಲಿದ್ದ ಕೂಲಿ ಕಾರ್ಮಿಕರು ಕೂಡಲೇ ಮೇಲಕ್ಕೆತ್ತಿ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ವೇಳೆಯಲ್ಲಿ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next