Advertisement

ಸ್ಥಳೀಯ ಸಂಸ್ಥೆ ಮೈತ್ರಿ: ಜಿಲ್ಲಾ ನಾಯಕರಿಗೆ ಬಿಟ್ಟಿದ್ದು

11:06 PM May 03, 2019 | Lakshmi GovindaRaj |

ಬೆಂಗಳೂರು: “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಸ್ಥಳೀಯ ನಾಯಕರಿಗೆ ಬಿಟ್ಟಿದ್ದು’ ಎಂದು ಕೆಪಿಸಿಸಿ ಆಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, “ಸ್ಥಳೀಯ ಮಟ್ಟದಲ್ಲಿ ಮೈತ್ರಿ ಅಥವಾ ಏಕಾಂಗಿ ಸ್ಪರ್ಧೆ ಬಗ್ಗೆ ಜಿಲ್ಲಾಧ್ಯಕ್ಷರು ಹಾಗೂ ಸ್ಥಳೀಯ ಶಾಸಕರೇ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.

“ಬಿಜೆಪಿ ಹೊರತುಪಡಿಸಿ ಅಗತ್ಯ ಇದ್ದರೆ ಬೇರೆ ಸಮಾನ ಮನಸ್ಕ ಹಾಗೂ ಜಾತ್ಯತೀತ ನಿಲುವು ಹೊಂದಿರುವ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಅಧಿಕಾರ ನೀಡಲಾಗಿದೆ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next