Advertisement

ಶ್ರೀನಗರ: ತ್ರಿವರ್ಣ ಧ್ವಜ ಹಾರಿಸುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ

03:48 PM Aug 14, 2018 | Team Udayavani |

ಹೊಸದಿಲ್ಲಿ : ಇಡಿಯ ದೇಶವೇ 72ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗುತ್ತಿರುವ ನಡುವೆ ಶ್ರೀನಗರದ ಲಾಲ್‌ ಚೌಕದಲ್ಲಿಂದು ಸ್ವಾತಂತ್ರ್ಯದ ಮುನ್ನಾ ದಿನ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಲು ಮುಂದಾದ ವ್ಯಕ್ತಿಯನ್ನು ಸ್ಥಳೀಯರು ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

Advertisement

ಹಲ್ಲೆ ನಡೆಯುತ್ತಿದ್ದುದನ್ನು ಕಂಡ ಸಿಆರ್‌ಪಿಎಫ್ ಭದ್ರತಾ ಸಿಬಂದಿಗಳು ಧಾವಿಸಿ ಬಂದು ಹಲ್ಲೆಗೊಳಗಾಗಿದ್ದ ವ್ಯಕ್ತಿಯನ್ನು ಪಾರು ಮಾಡಿದ್ದಾರೆ. 

ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು ಅಪರಾಧಿಗಳನ್ನು ಹಿಡಿದು ಶಿಕ್ಷಿಸುವುದಾಗಿ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next