Advertisement

ಅಂಡರ್‌ಪಾಸ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

03:13 PM Jan 04, 2020 | Team Udayavani |

ಬೆಳಗಾವಿ: ನಗರ ಕೇಂದ್ರ ಬಸ್‌ ನಿಲ್ದಾಣದಿಂದ ಸಿಟಿ ಬಸ್‌ ಟರ್ಮಿನಲ್‌ ವರೆಗೂ ಅಂಡರ್‌ಪಾಸ್‌ ನಿರ್ಮಿಸುವ ಕುರಿತು ಶುಕ್ರವಾರ ಸ್ಮಾರ್ಟ್‌ಸಿಟಿ ಅಧಿಕಾರಿಗಳ ಸಭೆ ನಡೆಸಲಾಯಿತು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಬಸ್‌ ನಿಲ್ದಾಣದಿಂದ ಸಿಟಿ ಬಸ್‌ ಟರ್ಮಿನಲ್‌ ವರೆಗೂ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಡರ್‌ ಪಾಸ್‌ ಮಾಹಿತಿ ನೀಡಿದರು.

Advertisement

ಅಂಡರ್‌ ಪಾಸ್‌ ನಿರ್ಮಾಣ ಕಾಮಗಾರಿ ಆರಂಭಗೊಳ್ಳುವ ಮೊದಲು ವಿದ್ಯುತ್‌ ಕಂಬಗಳ ಸ್ಥಳಾಂತರ ಸೇರಿದಂತೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಹೆ„ಟೆಕ್‌ ಸಿಬಿಟಿ ನಿಲ್ದಾಣ ನಿರ್ಮಿಸಲಾಗುತ್ತಿದ್ದು ಇದಕ್ಕೆ ಪೂರಕವಾಗಿ ಕೇಂದ್ರ ಬಸ್‌ ನಿಲ್ದಾಣದಿಂದ ಎದುರಿನ ಸಿಬಿಟಿ ವರೆಗೆ ಪ್ರಯಾಣಿಕರಿಗೆ ಅನಕೂಲವಾಗುವಂತೆ  ಅಂಡರ್‌ ಪಾಸ್‌ ನಿರ್ಮಿಸಲಾಗುತ್ತಿದೆ. ಈಗಾಗಲೇ ಯೋಜನೆಯ ರೂಪುರೇಷೆ ಸಹ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ನಂತರ ಕೇಂದ್ರ ಬಸ್‌ ನಿಲ್ದಾಣ ಹಾಗೂ ಸಿಟಿ ಬಸ್‌ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿದ ಆಧಿಕಾರಿಗಳು ಅಂಡರ್‌ ಪಾಸ್‌ ನಿರ್ಮಾಣ ಮಾಡಲಿರುವ ಸ್ಥಳದ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆಎಚ್‌, ದಂಡು ಮಂಡಲಿಯ ಸಿಇಒ ಬರ್ಚಸ್ವ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು, ಜಲ ಮಂಡಳಿ ಅಧಿಕಾರಿಗಳು, ಪೊಲೀಸ್‌ ಇಲಾಖೆಯ ಅಧಿಕಾರಿಗಳು, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧಿಕಾರಿಗಳು ಉಪಸ್ಥಿತರಿದ್ಧರು.

Advertisement

Udayavani is now on Telegram. Click here to join our channel and stay updated with the latest news.

Next