Advertisement

ಶಂಕಿತರಿಗೆ ಎಂವಿಜೆ ಆಸ್ಪತ್ರೆಯಲ್ಲಿ ಸ್ಥಳ ಮೀಸಲು

06:22 PM Mar 15, 2020 | Team Udayavani |

ಹೊಸಕೋಟೆ: ತಾಲೂಕಿಗೆ ವಿದೇಶದಿಂದ ಆಗಮಿಸುವ ಹಾಗೂ ಕೊರೊನಾ ಸೋಂಕಿನ ಬಗ್ಗೆ ಸಂಶಯಾಸ್ಪದ ವ್ಯಕ್ತಿಗಳಿಗೆ ಸಮೀಪದ ಎಂವಿಜೆ ಆಸ್ಪತ್ರೆಯಲ್ಲಿ ಸ್ಥಳ ಮೀಸಲಿಡಲಾಗಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

Advertisement

ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಫೆ.1ರಿಂದ ಇದುವರೆವಿಗೂ ಸಾಮಾನ್ಯ ನೆಗಡಿ, ಕೆಮ್ಮಿಗೆ ಒಳಗಾದ 1982 ವ್ಯಕ್ತಿಗಳನ್ನು ತಪಾಸಣೆ ನಡೆಸಿದ್ದು ಯಾವುದೇ ಕೊರೊನಾ ಶಂಕಿತರು ಕಂಡುಬಂದಿಲ್ಲ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 300 ಜನರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿದ್ದು ತಜ್ಞ ವೈದ್ಯರು ಸಂಶಯಾಸ್ಪದ ವ್ಯಕ್ತಿಗಳ ಚಲನವಲನ, ಆರೋಗ್ಯದ ಪರಿಸ್ಥಿತಿ ಬಗ್ಗೆ 14 ದಿನ ನಿಗಾವಹಿಸುವರು. ನಂತರದ 14 ದಿನಗಳ ಕಾಲ  ಶಂಕಿತರೇ ಸ್ವತ: ವೈಯಕ್ತಿಕವಾಗಿ ಗಮನಹರಿಸಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ವೈದ್ಯರ ಗಮನಕ್ಕೆ ತರಲು ಸೂಚಿಸಲಾಗಿದೆ.

ಸಮುದಾಯದಲ್ಲಿ ಕೊರೆನಾ ಬಗ್ಗೆ ಅನಾವಶ್ಯಕವಾಗಿ ಭೀತಿಗೊಳಗಾಗದಂತೆ ಸೂಕ್ತ ತಿಳಿವಳಿಕೆ ನೀಡಲು ನಗರಸಭೆ, ಗ್ರಾಮ ಪಂಚಾಯಿತಿ ವತಿಯಿಂದ ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿಗಳನ್ನುಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಹ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಷ್ಟೇ ಅಲ್ಲದೆ ಮಾಸ್ಕ್ಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆ ಮಾರಾಟ ಮಾಡುವ ಔಷಧ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಂಡು ಪರವಾನಗಿಯನ್ನು ರದ್ದುಪಡಿಸಲು ಸಹ ಅವಕಾಶವಿದೆ. ವೈಯಕ್ತಿಕ ಸ್ವತ್ಛತೆಗೆ ಆದ್ಯತೆ ನೀಡಿ ಉತ್ತಮ ಆರೋಗ್ಯ ಕಾಪಾಡಿಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ: ಮಂಜುನಾಥ್‌ ಮಾತನಾಡಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಬೆಂಗಳೂರಿನ ರಾಜೀವ್‌ ಗಾಂಧಿ ಎದೆರೋಗ ಆಸ್ಪತ್ರೆಗೆ ಕಳುಹಿಸಿ ತಪಾಸಣೆಗೆ ಒಳಪಡಿಸಲಾಗುವುದು. ಆಸ್ಪತ್ರೆಯಲ್ಲಿ ಶಂಕಿತರು ವಾಸ್ತವ್ಯ ವಿರುವ ಸ್ಥಳವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಸಾರ್ವಜನಿಕರು ಜನಸಂದಣೆ ಸ್ಥಳಗಳಲ್ಲಿ ಸೇರುವುದರಿಂದ ಮುಕ್ತರಾಗಿ ಇಲಾಖೆ ನೀಡಿರುವ ಮಾರ್ಗದರ್ಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

Advertisement

ಇಓ ಸಿ.ಎಸ್‌. ಶ್ರೀನಾಥ್‌ಗೌಡ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ: ಸತೀಶ್‌ ಕುಮಾರ್‌, ಎಂವಿಜೆ ಆಸ್ಪತ್ರೆಯ ಸಹಾಯಕ ಮೆಡಿಕಲ್‌ ಸೂಪರಿಂಟೆಂಡೆಟ್‌ ಡಾ: ಪ್ರಮೋದ್‌ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next