Advertisement

ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟು; ಕಾರ್ಡ್ ಇಲ್ಲದವರಿಗೂ ಪಡಿತರ: ಯಡಿಯೂರಪ್ಪ

09:05 AM Apr 05, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸೋಂಕಿತರ ಪೈಕಿ ಯಾರು ಕೂಡಾ ವೆಂಟಿಲೇಟರ್ ನಲ್ಲಿಲ್ಲ. ರಾಜ್ಯದಲ್ಲಿ ಇದುವರೆಗೆ 128 ಕೋವಿಡ್-19 ಸೋಂಕಿತರ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಾಗಿಲ್ಲ. ರಾಜ್ಯಾದ್ಯಂತ 480 ಹಾಪ್ ಕಾಮ್ಸ್ ಮೂಲಕ ರೈತರಿಂದ ಹಣ್ಣು ತರಕಾರಿ ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಕೋವಿಡ್-19 ಸಂಬಂಧ ಹಿರಿಯ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಪಡಿತರ ಚೀಟಿದಾರರಿಗೆ ಮುಂಗಡವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕಾರ್ಡ್ ಹೊಂದಿರದವರಿಗೂ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next