Advertisement

ಬೆಂಗಳೂರು ಬಿಟ್ಟು ಹೊರ ಜಿಲ್ಲೆಗೆ ಲಾಕ್ ಡೌನ್ ಸಡಿಲಿಕೆ ಸಾಧ್ಯತೆ?

06:28 PM Jan 06, 2022 | Team Udayavani |

ಬೆಂಗಳೂರು:ಅನಿರೀಕ್ಷಿತ ಲಾಕ್ ಡೌನ್ ಹೇರಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬೆಂಗಳೂರು ಬಿಟ್ಟು ಹೊರ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್ ಡೌನ್ ತೆರವುಗೊಳಿಸುವ ಸಾಧ್ಯತೆ ಹೆಚ್ಚಿದೆ.

Advertisement

ಸಂಪುಟ ಸಭೆ ಬಳಿಕ ಅನೌಪಚಾರಿಕ ಚರ್ಚೆ ಆರಂಭವಾಗುತ್ತಿದ್ದಂತೆ ಈಶ್ವರಪ್ಪ ಸೇರಿದಂತೆ ಕೆಲ ಸಚಿವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಇಲ್ಲವೇ ಇಲ್ಲ. ಅನಿರೀಕ್ಷಿತ ಲಾಕ್ ಡೌನ್ ನಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಾವೇನು ಉತ್ತರ ನೀಡಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ, ಕಳೆದ ಬಾರಿಯೂ ನಾವು ಬೆಂಗಳೂರು ಕೇಂದ್ರಿಕೃತವಾಗಿ ವಾರಾಂತ್ಯದ ಲಾಕ್ ಡೌನ್ ಹಾಗೂ ಇನ್ನಿತರ ಕ್ರಮ ಜಾರಿಗೆ ತಂದೆವು. ಆದರೆ ಜನರು ನಗರವನ್ಬು ಬಿಟ್ಟು ಹಳ್ಳಿಗೆ ತೆರಳಿದರು. ಹಳ್ಳಿ ಹಳ್ಳಿಗೂ ಕೋವಿಡ್ ಹರಡಿತು. ಇದನ್ನು ತಡೆಯುವುದಕ್ಕಾಗಿ ಈ ಬಾರಿ ಮುಂಜಾಗರುಕತೆ ವಹಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು ಎಂದು ಗೊತ್ತಾಗಿದೆ.

ಇನ್ನು ನಾಲ್ಕೈದು ದಿನ ಬಿಟ್ಟು ತಜ್ಞರ ಸಮಿತಿ ಸಭೆ ನಡೆಸುತ್ತೇವೆ. ಆ ಬಳಿಕ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್ ಡೌನ್ ಜಾರಿಯಲ್ಲಿ ಇಡಬೇಕೇ ಬೇಡವೇ ಎಂದು ತೀರ್ಮಾನ ತೆಗೆದುಕೊಳ್ಳುತ್ತೇವೆಂದು ಸಿಎಂ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next