Advertisement

ಮದುವೆಗಾಗಿ ಕಚೇರಿಗೆ ಬೀಗ!

02:24 PM Nov 16, 2021 | Team Udayavani |

ಮಸ್ಕಿ: ಖಾಸಗಿ ಕಾರ್ಯಕ್ರಮಕ್ಕಾಗಿ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಚೇರಿಗೆ ಬೀಗ ಹಾಕಿದ ಘಟನೆ ತಾಲೂಕಿನ ಗುಡದೂರು ಗ್ರಾಮದಲ್ಲಿ ನಡೆದಿದೆ.

Advertisement

ಬೇರೆ ತಾಲೂಕಿನಲ್ಲಿ ಸಹಕಾರಿ ಸ್ವಾಮ್ಯದ ಬ್ಯಾಂಕ್‌ ಸಿಬ್ಬಂದಿಯೊಬ್ಬರ ಮದುವೆ ಕಾರ್ಯಕ್ರಮದ ನಿಮಿತ್ತ ಗುಡದೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿ ಸಮಯದಲ್ಲಿ ಕಚೇರಿಗೆ ಬೀಗ ಹಾಕಿ ತೆರಳಿದ್ದು ಕಾನೂನು ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ರೈತ ಸಂಘ (ಕೆಆರ್‌ಎಸ್‌) ತಾಲೂಕು ಘಟಕದ ಅಧ್ಯಕ್ಷ ಸಂತೋಷ ಹಿರೇದಿನ್ನಿ ಆರೋಪಿಸಿದ್ದಾರೆ.

ಈಗಾಗಲೇ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ನಡೆದಿವೆ. ಕಚೇರಿಗೆ ಬೀಗ ಹಾಕಿದ್ದರಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ಪಿಕೆಎಸ್‌ಎಸ್‌ಎನ್‌ ಕೇಂದ್ರಕ್ಕೆ ಆಗಮಿಸಿದ್ದ ರೈತರು ಪರದಾಡಿ ವಾಪಸ್‌ ಹೋದ ಘಟನೆ ನಡೆದವು. ಕಚೇರಿ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಖಾಸಗಿ ಕೆಲಸಕ್ಕೆ ಹೋದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂತೋಷ ಹಿರೇದಿನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಹಕಾರ ಇಲಾಖೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next