Advertisement

ಲಾಕ್‌ಡೌನ್‌ ತೆರವು ವಾಣಿಜ್ಯ ಚಟುವಟಿಕೆಗೆ ಅನುಮತಿ

08:00 AM Jul 23, 2020 | mahesh |

ಮಂಗಳೂರು: ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಾರಿಯಲ್ಲಿದ್ದ 7 ದಿನಗಳ ಲಾಕ್‌ಡೌನ್‌ ಮುಕ್ತಾಯವಾಗಿದ್ದು, ಗುರುವಾರ ಬೆಳಗ್ಗಿನಿಂದ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಜಿಲ್ಲೆಯಾದ್ಯಂತ ಗುರುವಾರ ಬೆಳಗ್ಗೆ 5 ಗಂಟೆಯ ಅನಂತರ ಲಾಕ್‌ಡೌನ್‌ ತೆರವುಗೊಳ್ಳಲಿದ್ದು, ಈ ಹಿಂದೆ ಅನುಮತಿ ನೀಡಿದ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಮಾಲ್‌ಗ‌ಳು, ಖಾಸಗಿ, ಸರಕಾರಿ ಕಚೇರಿಗಳು ಕಾರ್ಯಾರಂಭಿಸಲಿವೆ.
ಪ್ರತೀದಿನ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಿಲ್ಲೆಯಲ್ಲಿ ಕರ್ಫ್ಯೂ ಹಾಗೂ ರವಿವಾರ ಪೂರ್ಣ ದಿನದ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

Advertisement

ಗುರುವಾರದಿಂದ ಜಿಲ್ಲೆಯಾದ್ಯಂತ ಶೇ.50ರಷ್ಟು ಖಾಸಗಿ ಹಾಗೂ ಸರಕಾರಿ ಬಸ್‌ಗಳು ಸಂಚಾರ ಆರಂಭಿಸಲಿವೆ. ಈ ಮೂಲಕ ಜನಸಂಚಾರ ಆರಂಭವಾಗಲಿದೆ. ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಪಾಲಿಕೆ ಸೇರಿದಂತೆ ಎಲ್ಲ ಸರಕಾರಿ ಕಚೇರಿಗಳು ಕೂಡ ಕನಿಷ್ಠ ಸಿಬಂದಿ ಮೂಲಕ ತೆರೆಯಲಿವೆ. ಮದ್ಯಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ.  ಗುರುವಾರದಿಂದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ, ಜು.25ರ ನಾಗರ ಪಂಚಮಿ ದಿನದಂದು ನಾಗ ದೇವರ ಸನ್ನಿಧಿಗೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿರಲಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ಸಿನೆಮಾ, ಸಭಾಂಗಣ, ಜಿಮ್‌, ಸಾರ್ವಜನಿಕ, ರಾಜಕೀಯ ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ. ಆದರೆ ಅನುಮತಿ ನೀಡಿದ ಎಲ್ಲ ಕಾರ್ಯಚಟುವಟಿಕೆ ನಡೆಸುವವರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next