Advertisement

Sunday Lockdown: ದಕ್ಷಿಣ ಕನ್ನಡ., ಉಡುಪಿ ಜಿಲ್ಲೆಗಳಲ್ಲಿ ಸಂಪೂರ್ಣ ಯಶಸ್ವಿ

04:09 AM Jul 07, 2020 | mahesh |
ಮಂಗಳೂರು/ಉಡುಪಿ: ಕೋವಿಡ್ ವೈರಸ್‌ ಸೋಂಕನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ರವಿವಾರ ಜಾರಿಗೊಳಿಸಿದ್ದ ಲಾಕ್‌ಡೌನ್‌ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಬಸ್‌ ಸಂಚಾರ ಸಂಪೂರ್ಣ ನಿಲುಗಡೆಗೊಂಡಿತ್ತು. ಖಾಸಗಿ ವಾಹನಗಳ ಸಂಚಾರವಿರಲಿಲ್ಲ. ನಗರಗಳಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿದ್ದವರನ್ನು ಪೊಲೀಸರು ತಡೆದು ವಾಪಸ್‌ ಕಳುಹಿಸಿದರು. ನಗರದ ಪ್ರಮುಖ ರಸ್ತೆಗಳು ಬಿಕೊ ಎನ್ನುತ್ತಿದ್ದವು. ಮೀನಿನ ಮಾರ್ಕೆಟ್‌ ಮತ್ತು ತರಕಾರಿ ಮಾರ್ಕೆಟ್‌ ಸಹಿತ ಇತರ ಎಲ್ಲ ಅಂಗಡಿ ಗಳು ಮುಚ್ಚಿದ್ದವು. ಪೊಲೀಸರು ಆಯಕಟ್ಟಿನ ಜಾಗಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ ಅನಾವಶ್ಯಕ ವಾಹನ ಸಂಚಾರವನ್ನು ನಿಯಂತ್ರಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next