Advertisement

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

09:33 PM May 17, 2021 | Team Udayavani |

ಹಾವೇರಿ: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಸೋಮವಾರ ಶಿಗ್ಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಮಟ್ಟದ ಕಾರ್ಯಪಡೆಯವರು ನಾಳೆ ಇಲ್ಲವೇ ನಾಡಿದ್ದು ಕೊರೊನಾ ಕುರಿತ ಅಂಕಿ-ಅಂಶಗಳನ್ನು ನೀಡಲಿದ್ದಾರೆ. ಲಾಕ್‌ಡೌನ್ ವಿಚಾರ ಸಚಿವ ಸಂಪುಟದ ಮುಂದೆ ಇರುವುದರಿಂದ ಅಲ್ಲಿಯೇ ಈ ಕುರಿತು ಚರ್ಚೆ ಮಾಡಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಇಲ್ಲಿಯ ತಹಸೀಲ್ದಾರ್ ಕಚೇರಿಯಲ್ಲಿ ಮುಖ್ಯಮಂತ್ರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಭಾಗಿಯಾದ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳಿದ್ದು ಫಿಜಿಶಿಯನ್ ವೈದ್ಯರ ಕೊರತೆ ಇದೆ.

ಇದನ್ನೂ ಓದಿ :ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

ಫಿಜಿಶಿಯನ್ ವೈದ್ಯರ ಕೊರತೆ ನೀಗಿಸಬೇಕು. ಹೆಚ್ಚುವರಿ ಆಕ್ಸಿಜನ್ ಟ್ಯಾಂಕರ್ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು. ಜತೆಗೆ ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ ಪ್ರಕರಣ ಈವರೆಗೆ ಕಂಡು ಬಂದಿಲ್ಲ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next