Advertisement

ಲಾಕ್‌ಡೌನ್‌: ಸಾರ್ವಜನಿಕರ ಬೆಂಬಲ

06:38 AM Jul 06, 2020 | Lakshmi GovindaRaj |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಕೋವಿಡ್‌ 19 ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದು, ಜಿಲ್ಲಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ದೊರೆಯಿತು.

Advertisement

ಹಾಲು, ಹಣ್ಣು, ತರಕಾರಿ, ಮೆಡಿಕಲ್‌ ಶಾಪ್‌, ಆಸ್ಪತ್ರೆ, ಪೆಟ್ರೋಲ್‌ ಬಂಕ್‌ ಮತ್ತಿತರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ವಾಣಿಜ್ಯ ವಹಿವಾಟು ಸಂಪೂರ್ಣ ಸ್ತಬ್ದಗೊಂಡಿತ್ತು. ಕೆಎಸ್‌ಆರ್‌ಟಿಸಿ  ಕೂಡ ತನ್ನ ಸೇವೆ ಸ್ಥಗಿತಗೊಳಿಸಿದ್ದರಿಂದ ಕೆಂಪು ಬಸ್‌ಗಳು ರಸ್ತೆಗೆ ಇಳಿಯಲಿಲ್ಲ.

ಬಿಕೋ ಎಂದ ರಸ್ತೆಗಳು: ಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ರಸ್ತೆಗಳು ಬೆಳಗ್ಗೆಯಿಂದ ರಾತ್ರಿವರೆಗೂ ಯಾವುದೇ ವಾಹನಗಳ ದಟ್ಟಣೆ  ಇಲ್ಲದೇ ಬಿಕೋ ಎನ್ನುತ್ತಿದ್ದವು. ಅಲ್ಲಲ್ಲಿ ದ್ವಿಚಕ್ರ ವಾಹನಗಳು ಬೆರಳೆಣಿಕೆಯ ಸಂಖ್ಯೆಯಲ್ಲಿ ಓಡಾಟ ನಡೆಸಿದ್ದು, ಬಿಟ್ಟರೆ ಹೆದ್ದಾರಿ ಎಂದಿನಂತೆ ಗೂಡ್ಸ್‌ ವಾಹನಗಳ ಸಂಚಾರ ಮಾಮೂಲಿಯಾಗಿತ್ತು.

ಪೊಲೀಸರುಆಯಕಟ್ಟಿನ ಸ್ಥಳಗಳಲ್ಲಿದ್ದು  ಪರಿಸ್ಥಿತಿ ಅವಲೋಕಿಸಿದರು. ಅನಗತ್ಯವಾಗಿ ತಿರುಗಾಡುತ್ತಿದ್ದ ಬೈಕ್‌ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಉಳಿ ದಂತೆ ಲಾಕ್‌ಡೌನ್‌ಗೆ ವರ್ತಕರು, ವಾಹನ ಸವಾರರು ಸ್ವಯಂ ಪ್ರೇರಣೆಯಿಂದ ಸಾಥ್‌ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next