Advertisement

ಲಾಕ್‌ಡೌನ್‌ ಸಡಿಲಿಕೆ : ದೇಶದ ಆರ್ಥಿಕತೆ ಸಹಜ ಸ್ಥಿತಿಗೆ

10:35 AM Jul 12, 2020 | sudhir |

ಹೊಸದಿಲ್ಲಿ: ಲಾಕ್‌ಡೌನ್‌ ಸಡಿಲ ಗೊಳಿಸಿದ ಬಳಿಕ ದೇಶದ ಆರ್ಥಿ ಕತೆ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಆರ್ಥಿಕತೆಯ ಮಧ್ಯಮಾ ವಧಿ ದೃಷ್ಟಿಕೋನ ಅನಿಶ್ಚಿತವಾಗಿಯೇ ಉಳಿದಿದೆ. ಹೀಗಾಗಿ ನಾವು ಈ ನಿಟ್ಟಿನಲ್ಲಿ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇರಿಸಬೇಕಾಗಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

Advertisement

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ 7ನೇ ಬ್ಯಾಂಕಿಂಗ್‌ ಮತ್ತು ಆರ್ಥಿಕತೆಯ ಸಮ್ಮೇಳನ ದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಅವರು ಮಾತನಾಡಿದರು. ಕಳೆದ 100 ವರ್ಷಗಳಲ್ಲಿಯೇ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಸಂಕಷ್ಟವನ್ನು ಕೋವಿಡ್ ತಂದೊ ಡ್ಡಿದೆ. ಈ ಸಂಕಷ್ಟ ಸಮಯದಲ್ಲಿ ಹಣಕಾಸು ವ್ಯವಸ್ಥೆಗಳನ್ನು ರಕ್ಷಿಸಲು ಆರ್‌ಬಿಐ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಆರ್‌ಬಿಐ ಮೊದಲ ಆದ್ಯತೆ ನೀಡಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next