Advertisement

ಕೋವಿಡ್  ಕರ್ಪ್ಯೂ ವೇಳೆ ಕುಂದಾನಗರಿ ಸಂಪೂರ್ಣ ಸ್ತಬ್ಧ

02:52 PM Apr 28, 2021 | Team Udayavani |

ಬೆಳಗಾವಿ: ಕೋವಿಡ್ ಕರ್ಪ್ಯೂ ಜಾರಿಯಾದ ಮೊದಲ ದಿನವೇ ಕುಂದಾನಗರಿ ಬೆಳಗಾವಿ ಸಂಪೂರ್ಣ ಸ್ತಬ್ಧಗೊಂಡಿದ್ದು, ಜನರು ಮನೆ ಬಿಟ್ಟು ಹೊರಗೆ ಬಾರದೇ ಕರ್ಪ್ಯೂಗೆ ಬೆಂಬಲ ನೀಡಿದರು.

Advertisement

ಬುಧವಾರ ಬೆಳಗ್ಗೆ 6 ಗಂಟೆಯಿಂದ 10ಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿದರು. ನಗರ ಪ್ರದೇಶಗಳಲ್ಲಿನ ತರಕಾರಿ, ದಿನಸಿ, ಮೀನು, ಮಾಂಸ ಖರೀದಿಗೆ ಮುಗಿಬಿದ್ದಿದ್ದರು.

ಬೆಳಗಾವಿ ನಗರ ಪ್ರದೇಶದಲ್ಲಿ ಸಾಮಾನ್ಯವಾಗಿ ಮೀನು-ಮಾಂಸ ಮಾರಾಟ ಬುಧವಾರ ಹೆಚ್ಚಾಗಿ ಇರುತ್ತದೆ.‌  ಹೀಗಾಗಿ ಕಸಾಯಿ ಗಲ್ಲಿಯಲ್ಲಿ ಮಟನ್ ಮತ್ತು ಚಿಕನ್ ಮಾರಾಟ ಹೆಚ್ಚಾಗಿ ಇತ್ತು. ೧೦ ಗಂಟೆಯ ನಂತರ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದರು.

ಜನಸಂಚಾರ, ವಾಹನ ಸಂಚಾರ ಸ್ತಬ್ಧಗೊಂಡಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕರ್ಪ್ಯೂ ಕಟ್ಟುನಿಟ್ಟಾಗಿ ಜಾರಿಯಾಗಿದೆ. ಅನಗತ್ಯ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದರು. ಗ್ರಾಮೀಣ ಪ್ರದೇಶಗಳಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next