Advertisement

Lok Sabha constituency ಬೆಂಗಳೂರು ಗ್ರಾಮಾಂತರದಿಂದ ಡಾ| ಮಂಜುನಾಥ್‌ ಸ್ಪರ್ಧೆ ಖಚಿತ?

10:34 PM Mar 11, 2024 | Team Udayavani |

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಡಾ| ಸಿ.ಎನ್‌. ಮಂಜುನಾಥ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

Advertisement

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಗಳೂರಿನ ನಿವಾಸದಲ್ಲಿ ಕರೆದಿದ್ದ ರಾಮನಗರ ಕ್ಷೇತ್ರದ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಡಾ| ಮಂಜುನಾಥ್‌ ಅವರನ್ನು ಕಣಕ್ಕಿಳಿಸಬೇಕು ಎಂಬ ಉತ್ಸಾಹ ಕಂಡುಬಂದಿದೆ.

ಹಾಗೆಯೇ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಡಾ| ಮಂಜುನಾಥ್‌ ಅವರನ್ನು ಅಭ್ಯರ್ಥಿ ಮಾಡಬೇಕು ಎಂದು ಬಿಜೆಪಿ ಹೈಕಮಾಂಡ್‌ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆಯಿದೆ. ಅವರು ಎನ್‌ಡಿಎ ಮೈತ್ರಿಕೂಟದ ಉಮೇದುದಾರ ಆಗಬೇಕು ಎಂದು ಎರಡೂ ಪಕ್ಷಗಳು ಬಯಸಿವೆ. ವಿರೋಧಿಗಳನ್ನು ಮಣಿಸುವುದೇ ನನ್ನ ಗುರಿ. ಯೋಗೇಶ್ವರ್‌ ಕೂಡ ಮಂಜುನಾಥ್‌ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next