Advertisement

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

11:32 PM Apr 24, 2024 | Team Udayavani |

ಹಾಸನ: ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ವೇಳೆ ಮೈತ್ರಿಪಕ್ಷಗಳ ಅಭ್ಯರ್ಥಿಗಳ ಪರ ಬಿಜೆಪಿಯ ಕೆಲ ವರು ಸಹಕಾರ ನೀಡಲಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು.

Advertisement

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಕೆಲವು ನಾಯಕರು ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗೆ ಸಹಕಾರ ನೀಡಲಿಲ್ಲ. ಮಂಡ್ಯ ಕ್ಷೇತ್ರದಲ್ಲೂ ಸುಮಲತಾ ಅಂಬರೀಷ್‌ ಹೀಗೆಯೇ ನಡೆದುಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹಣದ ಹೊಳೆ ಯನ್ನೇ ಹರಿಸಿದ್ದಾರೆ. ಮಂಡ್ಯದ ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕೂಲ ಮಾಡಿಕೊಡಲೆಂದೇ ಈ ರಾಜ್ಯ ಸರಕಾರ 125 ಕೋಟಿ ರೂ. ಎಲ್‌ಒಸಿ ಬಿಡುಗಡೆ ಮಾಡಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ 7 ಕಡೆ ಮಂಗಳವಾರ ತಾನು ಪ್ರಚಾರ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಕಾಂಗ್ರೆಸ್‌ನವರು ಎಷ್ಟೇ ಹಣದ ಹೊಳೆ ಹರಿಸಿದರೂ ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಾ| ಸಿ.ಎನ್‌. ಮಂಜುನಾಥ್‌ ಗೆಲ್ಲು ತ್ತಾರೆ ಎಂದು ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next