Advertisement

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

11:59 PM Apr 27, 2024 | Team Udayavani |

ಬೆಂಗಳೂರು: ಎರಡನೇ ಹಂತದ ಚುನಾವಣೆಗೆ ಎಲ್ಲೆಲ್ಲಿ ಆವಶ್ಯಕತೆ ಇದೆಯೋ ಅಲ್ಲಿಗೆ ಪ್ರಚಾರಕ್ಕೆ ತೆರಳಿ ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತೇನೆಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ರವಿವಾರ ಹೊಸಪೇಟೆಗೆ ಹೋಗುತ್ತಿದ್ದೇನೆ. ರಾಯಚೂರು, ಹೊಸಪೇಟೆ, ಶಿವಮೊಗ್ಗ ಲೋಕಸಭೆ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಮೊದಲ ಹಂತದಲ್ಲಿ ಚುನಾವಣೆ ನಡೆದ ಕ್ಷೇತ್ರಗಳಲ್ಲಿ ನನ್ನ ಅಭಿಪ್ರಾಯದ ಪ್ರಕಾರ 12ರಿಂದ 13 ಸ್ಥಾನವನ್ನು ಬಿಜೆಪಿ-ಜೆಡಿಎಸ್‌ ಮೈತ್ರಿ ಗೆಲ್ಲುತ್ತದೆ ಎಂದು ಹೇಳಿದರು. ಮಂಡ್ಯದಲ್ಲಿ ಶೇ. 81ಕ್ಕೂ ಹೆಚ್ಚು ಮತದಾನ ಆಗಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ ಮಂಡ್ಯದಲ್ಲಿ ಅತಿ ಹೆಚ್ಚು ಮತದಾನ ಆಗಿದೆ. ಹೀಗಾಗಿ ನನ್ನ ಗೆಲುವಿನ ಅಂತರ ಹೆಚ್ಚಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next