Advertisement

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

11:37 PM Apr 24, 2024 | Team Udayavani |

ಬಾಗೇಪಲ್ಲಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಇನ್ನಷ್ಟು ಭದ್ರವಾಗುತ್ತದೆ ಎಂದು ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ಹೇಳಿದರು.

Advertisement

ಪಟ್ಟಣದ ಕುರುಬರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿ, ನಾನು ಮೊದಲಿಂದಲೂ ಸಿದ್ದರಾಮಯ್ಯ ಅವರ ಶಿಷ್ಯ, ನನ್ನ ಮೊದಲ ಗುರು ಸಹ ಅವರೇ ಆಗಿದ್ದಾರೆ. ನಮ್ಮ ಮನೆಯಲ್ಲಿ ಏನೇ ಕಾರ್ಯಕ್ರಮ ನಡೆದರೂ ಮೊದಲು ಅಮಂತ್ರಣ ಕೊಡುವುದು ಸಿದ್ದರಾಮಯ್ಯ ಅವರಿಗೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next