Advertisement

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

10:42 AM Apr 26, 2024 | Team Udayavani |

ಉಡುಪಿ: ಲೋಕ ಸಭಾ ಚುನಾವಣೆಯ ಕಾವು ಜೋರಾಗಿದ್ದು ರಾಜ್ಯದಲ್ಲಿ ಇಂದು ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಅದರಂತೆ ಮತದಾರರು ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಅದರಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳಿಗ್ಗೆ ೯ ಗಂಟೆಯ ಹೊತ್ತಿಗೆ 12.89% ಮತದಾನವಾಗಿದೆ ಎಂದು ಹೇಳಲಾಗಿದೆ.

Advertisement

ಉಡುಪಿಯ ಮತದಾರರು ಬೆಳಿಗ್ಗೆಯೇ ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಮತಕೇಂದ್ರ ಸಂಖ್ಯೆ 97 ರಲ್ಲಿ ಮತದಾನ ಮಾಡಿದರು.

ಅದರಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ. ಕೆ ರವರು ಉಡುಪಿಯ ಅಜ್ಜರ ಕಾಡಿನ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತ ಚಲಾಯಿಸಿದರು. ಜಿ.ಪಂ ಸಿಇಒ ಪ್ರತೀಕ್ ಬಾಯಲ್ ಅವರು ಉಡುಪಿಯ ಅಜ್ಜರ ಕಾಡಿನ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತ ಚಲಾಯಿಸಿದರು.

ಅದರಂತೆ ಕಟ್ಟಿಂಗೇರಿ ವಾರ್ಡ್ 1 ಬೂತ್ ನಂಬರ್ 104 ರಲ್ಲಿ ಬಿರುಸಿನ ಮತದಾನ ನಡೆಯಿತು ಮತದಾನ ಬಹಿಷ್ಕಾರ ಹಿಂಪಡೆದ ನಂತರ ಈ ವಾರ್ಡ್ ನ ಮತದಾರರು ಅತೀ ಉತ್ಸಾಹ ದಲ್ಲಿ ಮತದಾನ ಪ್ರಕ್ರಿಯೆ ಯಲ್ಲಿ ಭಾಗವಹಿಸಿದರು.

Advertisement

ಚಿಕ್ಕಮಗಳೂರು:
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೆತ್ರದ ಮತದಾನ ಪ್ರಕ್ರಿಯೆ ಕಾಫಿನಾಡಿನಲ್ಲಿ ಬಿರುಸು ಪಡೆದುಕೊಂಡಿದ್ದು, ಬೆಳಿಗೆಯಿಂದಲೇ ಜನರು ಉತ್ಸುಕರಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಶೃಂಗೇರಿ ವಿಧಾನಸಭಾ‌ ಕ್ಷೇತ್ರದಲ್ಲಿ ಶೇ.13.7, ಮೂಡಿಗೆರೆ ಶೇ.11.35, ಚಿಕ್ಕಮಗಳೂರು ಶೇ.11.02, ತರೀಕೆರೆ ಶೇ.9.69 ಹಾಗೂ ಹಾಸನ ಲೋಕಸಭಾ ವ್ಯಾಪ್ತಿಯ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.8.51ರಷ್ಟು ಜನರು ಬೆಳ್ಳಿಗೆ 9ಗಂಟೆ ವೇಳೆಗೆ ತಮ್ಮ ಹಕ್ಕು ಚಲಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next