Advertisement

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸರಣಿ ಸಭೆ

06:20 AM Aug 03, 2018 | |

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ಶುಕ್ರವಾರದಿಂದ ಮೂರು
ದಿನ ಲೋಕಸಭಾ ಕ್ಷೇತ್ರವಾರು ಸಭೆಗಳನ್ನು ಆಯೋಜಿಸಿದೆ.

Advertisement

ಜತೆಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವೇಳಾಪಟ್ಟಿಯೂ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಆ ಚುನಾವಣೆಗೂ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್‌ ಅಧ್ಯಕ್ಷತೆಯಲ್ಲಿ ನಡೆಯುವ ಸರಣಿ ಸಭೆಗಳಲ್ಲಿಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್‌, ದಿನೇಶ್‌ಗುಂಡೂರಾವ್‌, ಈಶ್ವರ್‌ ಖಂಡ್ರೆ ಇತರರು ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ,ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ ಹಾಗೂ ಉತ್ತರಕ್ಷೇತ್ರಗಳ ಕಾಂಗ್ರೆಸ್‌ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌, ಕಲಬುರಗಿ, ಬೆಳಗಾವಿ, ಚಿಕ್ಕೋಡಿ,ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ಆಯೋಜನೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next