Advertisement

Lok Sabha Elections; ಮತ್ತೊಮ್ಮೆ ಪುಟಿದೇಳುವ ವಿಶ್ವಾಸದಲ್ಲಿ ಜೆಡಿಎಸ್‌

09:21 PM Jun 04, 2024 | Team Udayavani |

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾವಣೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್‌ನ ಅಸ್ತಿತ್ವ ನಿರ್ಧರಿಸುವ ಚುನಾವಣೆ ಎನ್ನುವಂತೆಯೇ ಬಿಂಬಿತವಾಗಿತ್ತು.

Advertisement

2019ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌, 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಮಾತ್ರ ಗೆದ್ದಿತ್ತು. ಈ ಬಾರಿ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸಿದ ಮೂರರ ಪೈಕಿ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಕುಮಾರಸ್ವಾಮಿ ಅವರ ಅಧ್ಯಕ್ಷತೆಯೂ ಗೆದ್ದಿದೆ.

ತಾವು ರಾಜ್ಯಾಧ್ಯಕ್ಷ ಇರುವಾಗಲೇ ಲೋಕಸಭೆ ಚುನಾವಣೆಯಲ್ಲಿ 2 ಸ್ಥಾನ ಗೆದ್ದಿರುವುದು ಒಂದು ಸಾಧನೆ. ಆದರೆ, ಕಳೆದ ಬಾರಿ ಕಳೆದುಕೊಂಡಿದ್ದ ಮಂಡ್ಯದಲ್ಲಿ ತಾವೇ ನಿಂತು ಗೆದ್ದಿರುವುದು ಮತ್ತೂಂದು ಸಾಧನೆ. ಈ ಮೂಲಕ ಮಂಡ್ಯ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ಕುಮಾರಸ್ವಾಮಿ, ಹಳೇ ಮೈಸೂರು ಭಾಗದಲ್ಲಿ ಮತ್ತೆ ಪುಟಿದೇಳುವ ವಿಶ್ವಾಸವನ್ನು ಪಕ್ಷಕ್ಕೆ ಕೊಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎನ್‌. ಮಂಜುನಾಥ್‌ ಅವರನ್ನು ಜೆಡಿಎಸ್‌ ಬದಲು ಬಿಜೆಪಿಯಿಂದ ಸ್ಪರ್ಧೆಗಿಳಿಸುವ ತಂತ್ರ ಹೂಡಿದ ಕುಮಾರಸ್ವಾಮಿ, ರಾಜಕೀಯ ತಂತ್ರಗಾರಿಕೆಯಲ್ಲೂ ಪಾರಮ್ಯ ಮೆರೆದಿದ್ದಾರೆ. ಒಟ್ಟಾರೆ ಕುಮಾರಸ್ವಾಮಿ ಅವರ ನಾಯಕತ್ವ ಮತ್ತೊಮ್ಮೆ ರಾಜ್ಯ ಜೆಡಿಎಸ್‌ಗೆ ಪುಷ್ಟಿ ನೀಡಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next