Advertisement
ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ರವಿವಾರ ಬೃಹತ್ ವೇದಿಕೆ ಕಾರ್ಯಕ್ರಮಗಳಿಗಿಂತ ರ್ಯಾಲಿ, ರೋಡ್ ಶೋಗಳ ಭರಾಟೆ ಇರಲಿದೆ.
ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇಬ್ಬರು ಮಾಜಿ ಸಿಎಂಗಳು, ಇಬ್ಬರು ಹಾಲಿ ಕೇಂದ್ರ ಸಚಿವರು ಸ್ಪರ್ಧೆಯಲ್ಲಿರುವುದರಿಂದ ಚುನಾವಣೆ ಪ್ರತಿಷ್ಠೆ ಪಡೆದುಕೊಂಡಿದೆ. ಹಾವೇರಿ ಮತ್ತು ಬೆಳಗಾವಿಯಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಧಾರವಾಡದಿಂದ, ಭಗವಂತ ಖೂಬಾ ಬೀದರ್ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಇನ್ನುಳಿದಂತೆ ಬೆಳಗಾವಿಯಿಂದ ಮೃಣಾಲ್ ಹೆಬ್ಟಾಳ್ಕರ್, ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್, ಬೀದರ್ನಿಂದ ಸಾಗರ್ ಖಂಡ್ರೆ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದರೆ, ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಬಿಜೆಪಿಯಿಂದ ಕಣದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡೆದ್ದಿದ್ದರೆ, ದಾವಣಗೆರೆಯಲ್ಲಿ ವಿನಯ್ ಕುಮಾರ್ ಕಾಂಗ್ರೆಸ್ ವಿರುದ್ಧ ಸೆಟೆದು ನಿಂತಿದ್ದಾರೆ.