Advertisement
ಜುಲೈ 18 ರಂದು ಅಧಿವೇಶನದ ಆರಂಭದಿಂದಲೂ, ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ಮತ್ತು ಜಿಎಸ್ಟಿ ವಿಷಯವನ್ನು ಪ್ರಸ್ತಾಪಿಸುತ್ತಲೇ ಇದ್ದವು, ಇದು ಕಲಾಪದ ಸಮಯ ಬಹುತೇಕ ಗದ್ದಲದಲ್ಲೇ ಕಳೆಯಲು ಕಾರಣವಾಯಿತು.
Related Articles
Advertisement
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಸಂಸತ್ತಿಗೆ ಹಾಜರಾಗುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ವಾರ ಲೋಕಸಭೆಗೆ ತಿಳಿಸಿದ್ದರು. ಹೀಗಾಗಿ ಕೂಡಲೇ ಬೆಲೆ ಏರಿಕೆ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿತ್ತು. ಸರ್ಕಾರ ಮತ್ತು ಪ್ರತಿಪಕ್ಷಗಳೆರಡೂ ಈ ವಿಷಯದ ಚರ್ಚೆಯಿಂದ ಓಡಿಹೋಗುತ್ತಿವೆ ಎಂದು ಪರಸ್ಪರ ಆರೋಪಿಸಿದ್ದಾರೆ.
ಆದರೆ ಸೋಮವಾರದಿಂದ ಸಾಮಾನ್ಯ ಸದನದ ಕಲಾಪಗಳು ಪುನರಾರಂಭಗೊಳ್ಳಲಿದ್ದು, ಮೊದಲು ಕೆಳಮನೆಯಲ್ಲಿ ಚರ್ಚೆ ನಡೆಯಲಿದ್ದು, ನಂತರ ಮೇಲ್ಮನೆಯಲ್ಲಿ ಚರ್ಚೆ ನಡೆಯಬಹುದು ಎಂದು ರಾಜಕೀಯ ಮೂಲಗಳು ಶುಕ್ರವಾರ ತಿಳಿಸಿವೆ.