Advertisement

Lok Sabha Polls; ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ?

11:59 PM Mar 17, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ (ಮಾ.18) ಜೆಡಿಎಸ್‌ ಉಸ್ತುವಾರಿಗಳ ಸಭೆ ನಡೆಯಲಿದ್ದು, ಮಂಡ್ಯದಲ್ಲಿ ಬಹುತೇಕ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

Advertisement

ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣೆಯ ಉಸ್ತುವಾರಿ ನೀಡಲಾಗಿರುವ ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಸಚಿವರು ಹಾಗೂ ಇತರ ಮುಖಂಡರ ಸಭೆ ನಡೆಯಲಿದೆ.

ಶನಿವಾರ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಿಲ್ಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿಯಾಗಿ ಕ್ಷೇತ್ರಗಳ ಕುರಿತು ಖಚಿತಪಡಿಸಿ ಕೊಂಡ ಬಳಿಕ ಉಸ್ತುವಾರಿಗಳ ಸಭೆಯನ್ನು ಕರೆಯಲಾಗಿದೆ.

ಈಗಾಗಲೇ ಹಾಸನದಲ್ಲಿ ಅಭ್ಯರ್ಥಿ ಅಂತಿಮವಾಗಿದ್ದು, ಮಂಡ್ಯದಲ್ಲಿ ಬಹುತೇಕ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇದೇ ವೇಳೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ವಿಚಾರದಲ್ಲಿ ಇನ್ನೂ ಒಂದಿಷ್ಟು ಸ್ಪಷ್ಟತೆ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ದಿಲ್ಲಿಯ ಬೆಳವಣಿಗೆಗಳನ್ನು ಕುಮಾರಸ್ವಾಮಿ ಸಭೆಯ ಮುಂದಿಡಲಿದ್ದಾರೆ. ಅನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next