Advertisement

Lok Sabha Polls ತುಮಕೂರಲ್ಲಿ ಅಸಮಾಧಾನದ ಹೊಗೆ

12:40 AM Mar 12, 2024 | Team Udayavani |

ತುಮಕೂರು: ಬಿಜೆಪಿಯ ಭದ್ರಕೋಟೆ ತುಮಕೂರಿನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಮುಂದುವರಿದಿದೆ.

Advertisement

ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆ ಸಾಧ್ಯತೆ ಹಿನ್ನೆಲೆಯಲ್ಲಿ ಇನ್ನಿತರ ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರಿಂದ ಅಸಮಾಧಾನ ಭುಗಿಲೆದ್ದಿದೆ.

ಬೆನ್ನಲ್ಲೇ ಗೋ ಬ್ಯಾಕ್‌ ಸೋಮಣ್ಣ ಅಭಿಯಾನವೂ ಅಲ್ಲಲ್ಲಿ ಬಿರುಸಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಮುದ್ದಹನುಮೇಗೌಡರಿಗೆ ಟಿಕೆಟ್‌ ಘೋಷಿಸಿದೆ.

ಆದರೆ ಬಿಜೆಪಿಯಲ್ಲಿ ಅಭ್ಯರ್ಥಿ ಯಾರು ಎಂದು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ವಿ.ಸೋಮಣ್ಣ ಅವರಿಗೇ ಟಿಕೆಟ್‌ ಸಿಗುತ್ತದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಬೆಂಬಲಿಗರು ವಿರೋಧದ ಕೂಗು ಹೊರಡಿಸಿದ್ದಾರೆ. ಹೊರಗಿನವರಿಗೆ ಟಿಕೆಟ್‌ ನೀಡದಂತೆ ಒತ್ತಡ ಮುಂದುವರಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next