Advertisement

ಶಿವಮೂರ್ತಿ ನಾಯಕ್‌ ವಿರುದ್ಧ ಲೋಕಾಕ್ಕೆ ದೂರು

06:50 AM Oct 13, 2017 | |

ಬೆಂಗಳೂರು: ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಕಾಂಗ್ರೆಸ್‌ ಶಾಸಕ ಶಿವಮೂರ್ತಿ ನಾಯಕ್‌ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

Advertisement

ಶಾಸಕ ಶಿವಮೂರ್ತಿ ನಾಯಕ್‌ ತಮ್ಮ ಪುತ್ರನಿಗೆ ಗಣಿ ಪರವಾನಗಿ ನೀಡಲು ವಿಳಂಬ ಮಾಡು ತ್ತಿದ್ದಾರೆಂಬ ಕಾರಣಕ್ಕೆ ಇಲಾಖೆಯ ಕಾರ್ಯದರ್ಶಿ ರಾಜೇಂದ್ರಕುಮಾರ್‌ ಕಠಾರಿಯಾ ಅವರಿಗೆ ನಿಂದಿಸಿ ಬೆದರಿಕೆ ಹಾಕಿರುವ ಕ್ರಮ ಸರಿಯಾಗಿಲ್ಲ. ಬೇಜವಾಬ್ದಾರಿ ವರ್ತನೆ ತೋರಿರುವ ಶಿವಮೂರ್ತಿ ನಾಯಕ್‌ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next