Advertisement

ಲೋಕಾಯುಕ್ತ ಡಿಎಸ್ಪಿ ಅರುಣ ನಾಯಕ ಹೃದಯಾಘಾತದಿಂದ ಮೃತ್ಯು

11:30 PM Jul 19, 2023 | Team Udayavani |

ವಿಜಯಪುರ : ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವಿಗೀಡಾದ ಘಟನೆ ವರದಿಯಾಗಿದೆ.

Advertisement

ವಿಜಯಪುರ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ ನಾಯಕ  ಹೃದಯಘಾತದಿಂದ ನಿಧನ ಹೊಂದಿದವರು.ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ಚಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳಿಯ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ಅರುಣ ನಾಯಕ ಸಾವಿಗೀಡಾಗಿದ್ದಾರೆ.ಪತ್ನಿ ಹಾಗೂ ಓರ್ವ ಪುತ್ರನನ್ನು ಅರುಣ ನಾಯಕ ಅಗಲಿದ್ದಾರೆ.ಅರುಣ ನಾಯಕ ಪುತ್ರ  ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.

ಅರುಣ ಅವರಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿಯುತ್ತಲೇ ಲೋಕಾಯುಕ್ತ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಅರುಣ ನಾಯಕ ಅವರ ನಿಧನದ ಸುದ್ದಿ ತಿಳಿಯುತ್ತಲೇ ಪತ್ನಿ, ಮಕ್ಕಳು ವಿಜಯಪುರದತ್ತ ಧಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next